ಬೆಂಗಳೂರು: ಮಂಗಳೂರು ನಗರದಲ್ಲಿ ಕುಡಿಯುವ ನೀರಿಗೆ ಕಲುಷಿತ ನೀರು ಸೇರ್ಪಡೆ ಆಗುತ್ತಿರುವುದನ್ನು ತಡೆಯದ ಮಂಗಳೂರು ನಗರ ಪಾಲಿಕೆಗೆ(ಎಂಸಿಸಿ) ಛೀಮಾರಿ ಹಾಕಿರುವ ಹೈಕೋರ್ಟ್, ಪಾಲಿಕೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ(ಕೆಎಸ್ಪಿಸಿಬಿ) ನಿರ್ದೇಶನ ನೀಡಿದೆ.