ನೆಗೆಟಿವ್ ವರದಿ ಇಲ್ಲದೆ ಕೇರಳ ಕಡೆಯಿಂದ ಬಂದವರನ್ನು ಅಲ್ಲಿಯೇ ತಡೆದು, ಗಂಟಲು ದ್ರವ ಸಂಗ್ರಹಿಸಿ, ಪರೀಕ್ಷೆಗೆ ಒಳಪಡಿಸಿದ ದೃಶ್ಯ ಭಾನುವಾರ ಕಂಡುಬಂತು. ಈವರೆಗೆ ಕೋವಿಡ್ ತಡೆ ಲಸಿಕೆ ಪಡೆದ ಪ್ರಮಾಣಪತ್ರ ತೋರಿಸಿದರೆ, ಗಡಿ ದಾಟಲು ಅವಕಾಶ ನೀಡಲಾಗುತ್ತಿತ್ತು. ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಕಾರಣ ಎರಡು ಜಿಲ್ಲೆಗಳ ನಡುವೆ ಬಸ್ ಸಂಚಾರವನ್ನು ಒಂದುವಾರದ ಮಟ್ಟಿಗೆ ಸ್ಥಗಿತಗೊಳಿಸಿ, ಶನಿವಾರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.