<p><strong>ಮಂಗಳೂರು:</strong> ನಗರದ ಕೊಟ್ಟಾರ ಚೌಕಿ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರಲ್ಲಿನ ಗುಂಡಿಯಿಂದಾಗಿ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಮಂಗಳವಾರ ಮೃತಪಟ್ಟಿದ್ದಾರೆ. </p>.ಮಂಗಳೂರು: ವಿದ್ಯುನ್ಮಾನ ವಾಹನ ಚಾಲನಾ ಪರೀಕ್ಷಾ ಪಥದಲ್ಲಿ ಕಂಪ್ಯೂಟರೀಕೃತ ವ್ಯವಸ್ಥೆ .<p>ಸ್ಕೂಟರ್ ನಲ್ಲಿ ಸಾಗುತ್ತಿದ್ದ ಮಹಿಳೆಯು ಗುಂಡಿ ತಪ್ಪಿಸುವ ಭರದಲ್ಲಿ ಹೆದ್ದಾರಿಗೆ ಉರುಳಿ ಬಿದ್ದಿದ್ದರು. ಈ ವೇಳೆ ಕೂಳೂರು ಕಡೆಯಿಂದ ಸಾಗಿ ಬಂದ ಮೀನಿನ ಲಾರಿ ಅವರ ಮೇಲೆ ಹರಿದಿತ್ತು.</p><p>ಉಡುಪಿ ಜಿಲ್ಲೆಯ ಪರ್ಕಳದ ಮಾಧವಿ (38 ) ಮೃತ ಮಹಿಳೆ. ಅವರು ನಗರದ ಹೊರವಲಯದ ಚಿತ್ರಾಪುರದಲ್ಲಿ ನೆಲೆಸಿದ್ದರು.</p><p>ಕುಂಟಿಕಾನದ ಎ.ಜೆ ಆಸ್ಪತ್ರೆಯ ರಕ್ತ ನಿಧಿಯಲ್ಲಿ ಟೆಕ್ನಿಷಿಯನ್ ಆಗಿದ್ದ ಅವರು ಬೆಳಿಗ್ಗೆ ಚಿತ್ರಾಪುರದಿಂದ ನಗರಕ್ಕೆ ಬರುವಾಗ ಈ ಅಪಘಾತ ಸಂಭವಿಸಿದೆ.</p>.ಮಂಗಳೂರು | ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಕಿರುಕುಳ: ಕ್ರಮಕ್ಕೆ ಆಗ್ರಹ.<p><strong>ಹೆದ್ದಾರಿ ಗುಂಡಿ ಮುಚ್ಚದ್ದಕ್ಕೆ ಆಕ್ರೋಶ: </strong>ನಗರದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅನೇಕ ಕಡೆ ಭಾರಿ ಗಾತ್ರದ ಗುಂಡಿಗಳು ಉಂಟಾಗಿವೆ. ಆದರೂ ಗುಂಡಿಗಳನ್ನು ದುರಸ್ತಿ ಪಡಿಸಲು ಕ್ರಮವಹಿಸದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p> .ಮಂಗಳೂರು | ‘ಮತೀಯತೆ ಕ್ಯಾನ್ಸರ್ಗೆ ಸಿಗದ ಚಿಕಿತ್ಸೆ’ : ಡಾ.ಶ್ರೀನಿವಾಸ ಬೇಸರ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ನಗರದ ಕೊಟ್ಟಾರ ಚೌಕಿ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರಲ್ಲಿನ ಗುಂಡಿಯಿಂದಾಗಿ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಮಂಗಳವಾರ ಮೃತಪಟ್ಟಿದ್ದಾರೆ. </p>.ಮಂಗಳೂರು: ವಿದ್ಯುನ್ಮಾನ ವಾಹನ ಚಾಲನಾ ಪರೀಕ್ಷಾ ಪಥದಲ್ಲಿ ಕಂಪ್ಯೂಟರೀಕೃತ ವ್ಯವಸ್ಥೆ .<p>ಸ್ಕೂಟರ್ ನಲ್ಲಿ ಸಾಗುತ್ತಿದ್ದ ಮಹಿಳೆಯು ಗುಂಡಿ ತಪ್ಪಿಸುವ ಭರದಲ್ಲಿ ಹೆದ್ದಾರಿಗೆ ಉರುಳಿ ಬಿದ್ದಿದ್ದರು. ಈ ವೇಳೆ ಕೂಳೂರು ಕಡೆಯಿಂದ ಸಾಗಿ ಬಂದ ಮೀನಿನ ಲಾರಿ ಅವರ ಮೇಲೆ ಹರಿದಿತ್ತು.</p><p>ಉಡುಪಿ ಜಿಲ್ಲೆಯ ಪರ್ಕಳದ ಮಾಧವಿ (38 ) ಮೃತ ಮಹಿಳೆ. ಅವರು ನಗರದ ಹೊರವಲಯದ ಚಿತ್ರಾಪುರದಲ್ಲಿ ನೆಲೆಸಿದ್ದರು.</p><p>ಕುಂಟಿಕಾನದ ಎ.ಜೆ ಆಸ್ಪತ್ರೆಯ ರಕ್ತ ನಿಧಿಯಲ್ಲಿ ಟೆಕ್ನಿಷಿಯನ್ ಆಗಿದ್ದ ಅವರು ಬೆಳಿಗ್ಗೆ ಚಿತ್ರಾಪುರದಿಂದ ನಗರಕ್ಕೆ ಬರುವಾಗ ಈ ಅಪಘಾತ ಸಂಭವಿಸಿದೆ.</p>.ಮಂಗಳೂರು | ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಕಿರುಕುಳ: ಕ್ರಮಕ್ಕೆ ಆಗ್ರಹ.<p><strong>ಹೆದ್ದಾರಿ ಗುಂಡಿ ಮುಚ್ಚದ್ದಕ್ಕೆ ಆಕ್ರೋಶ: </strong>ನಗರದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅನೇಕ ಕಡೆ ಭಾರಿ ಗಾತ್ರದ ಗುಂಡಿಗಳು ಉಂಟಾಗಿವೆ. ಆದರೂ ಗುಂಡಿಗಳನ್ನು ದುರಸ್ತಿ ಪಡಿಸಲು ಕ್ರಮವಹಿಸದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p> .ಮಂಗಳೂರು | ‘ಮತೀಯತೆ ಕ್ಯಾನ್ಸರ್ಗೆ ಸಿಗದ ಚಿಕಿತ್ಸೆ’ : ಡಾ.ಶ್ರೀನಿವಾಸ ಬೇಸರ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>