<p><strong>ಉಳ್ಳಾಲ:</strong> ಸಾರ್ವಜನಿಕ ದೂರು ಹಾಗೂ ಅಪಘಾತದ ಕಾರಣದಿಂದ ಲೋಕೋಪಯೋಗಿ ಇಲಾಖೆ ಹಾಗೂ ಸ್ಥಳೀಯಾಡಳಿತದ ನೇತೃತ್ವದಲ್ಲಿ ತೊಕ್ಕೊಟ್ಟು– ಮಂಗಳೂರು ವಿಶ್ವವಿದ್ಯಾನಿಲಯ ರಸ್ತೆಯ ತೊಕ್ಕೊಟ್ಟುವಿನಿಂದ ಅಸೈಗೋಳಿವರೆಗೆ ಹೆದ್ದಾರಿ ಬದಿಯ ಗೂಡಂಗಡಿಗಳ ತೆರವು ಕಾರ್ಯಾಚರಣೆ ಸೋಮವಾರ ನಡೆಯಿತು.</p>.<p>ಎರಡು ಜೆಸಿಬಿಗಳು ಹಾಗೂ 10 ಮಂದಿ ಕಾರ್ಮಿಕರು ಕಾರ್ಯನಿರ್ವಹಿಸಿ ಸುಮಾರು 50 ಗೂಡಂಗಡಿಗಳನ್ನು ತೆರವು ಗೊಳಿಸಿದರು.</p>.<p>ಹೆದ್ದಾರಿ ಸಮೀಪದ ಗೂಡಂಗಡಿ, ಬೀದಿ ಬದಿ ವ್ಯಾಪಾರದ ಶೆಡ್ ತೆರವುಗೊಳಿಸುವಂತೆ ಸಾರ್ವಜನಿಕರ ದೂರು ಆಧರಿಸಿ ಫೆ.2ರಂದು ಸೂಚನೆ ಅಂಟಿಸಲಾಗಿತ್ತು. ಫೆ.5ರ ಒಳಗೆ ತೆರವು ನಡೆಸುವಂತೆ ಸೂಚನೆ ನೀಡಲಾಗಿತ್ತು.</p>.<p>ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಬಸ್ ನಿಲ್ದಾಣದ 100 ಮೀ. ಅಂತರದಲ್ಲಿ ಎಲ್ಲಿಯೂ ಮೀನು ಮಾರಾಟ ನಡೆಸದಂತೆಯೂ ಸೂಚಿಸಲಾಯಿತು. </p>.<p>ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪ್ರೀತಮ್, ಸಹಾಯಕ ಎಂಜಿನಿಯರ್ ದಾಸ್ ಪ್ರಕಾಶ್, ಉಳ್ಳಾಲ ನಗರಸಭೆ ಆಯುಕ್ತ ಸಂತೋಷ್, ಆರೋಗ್ಯ ಅಧಿಕಾರಿ ನವೀನ್ ಕುಮಾರ್, ಬೆಳ್ಮ ಅಭಿವೃದ್ಧಿ ಅಧಿಕಾರಿ ರಮೇಶ್, ಉಳ್ಳಾಲ, ಕೊಣಾಜೆ ಮತ್ತು ಸಿಎಆರ್ ಸಿಬ್ಬಂದಿ ಭಾಗಿಯಾಗಿದ್ದರು.</p>.<p>ಬೀದಿ ಬದಿ ಅಂಗಡಿಗಳಿಗೆ ಸ್ಥಳೀಯಾಡಳಿತದಿಂದ ಪರವಾನಗಿ ಪಡೆದುಕೊಳ್ಳುವುದು ಕಡ್ಡಾಯವಾಗಿದೆ. ತಳ್ಳುವ ಗಾಡಿಗಳಲ್ಲಿ ವ್ಯಾಪಾರ ನಡೆಸಲು ಅಡ್ಡಿಯಿಲ್ಲ. ಆದರೆ, ಸಂಬಂಧಿಸಿದ ಸ್ಥಳೀಯಾಡಳಿತ ಸಂಸ್ಥೆಯಿಂದ ಬೀದಿ ಬದಿ ವ್ಯಾಪಾರ ಪರವಾನಗಿ ಪಡೆದುಕೊಂಡಿರಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗದಂತೆ, ರಸ್ತೆ ಹಾಗೂ ಪಾದಚಾರಿ ಮಾರ್ಗಗಳನ್ನು ಆಕ್ರಮಿಸದೆ ವ್ಯಾಪಾರ ನಡೆಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಳ್ಳಾಲ:</strong> ಸಾರ್ವಜನಿಕ ದೂರು ಹಾಗೂ ಅಪಘಾತದ ಕಾರಣದಿಂದ ಲೋಕೋಪಯೋಗಿ ಇಲಾಖೆ ಹಾಗೂ ಸ್ಥಳೀಯಾಡಳಿತದ ನೇತೃತ್ವದಲ್ಲಿ ತೊಕ್ಕೊಟ್ಟು– ಮಂಗಳೂರು ವಿಶ್ವವಿದ್ಯಾನಿಲಯ ರಸ್ತೆಯ ತೊಕ್ಕೊಟ್ಟುವಿನಿಂದ ಅಸೈಗೋಳಿವರೆಗೆ ಹೆದ್ದಾರಿ ಬದಿಯ ಗೂಡಂಗಡಿಗಳ ತೆರವು ಕಾರ್ಯಾಚರಣೆ ಸೋಮವಾರ ನಡೆಯಿತು.</p>.<p>ಎರಡು ಜೆಸಿಬಿಗಳು ಹಾಗೂ 10 ಮಂದಿ ಕಾರ್ಮಿಕರು ಕಾರ್ಯನಿರ್ವಹಿಸಿ ಸುಮಾರು 50 ಗೂಡಂಗಡಿಗಳನ್ನು ತೆರವು ಗೊಳಿಸಿದರು.</p>.<p>ಹೆದ್ದಾರಿ ಸಮೀಪದ ಗೂಡಂಗಡಿ, ಬೀದಿ ಬದಿ ವ್ಯಾಪಾರದ ಶೆಡ್ ತೆರವುಗೊಳಿಸುವಂತೆ ಸಾರ್ವಜನಿಕರ ದೂರು ಆಧರಿಸಿ ಫೆ.2ರಂದು ಸೂಚನೆ ಅಂಟಿಸಲಾಗಿತ್ತು. ಫೆ.5ರ ಒಳಗೆ ತೆರವು ನಡೆಸುವಂತೆ ಸೂಚನೆ ನೀಡಲಾಗಿತ್ತು.</p>.<p>ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಬಸ್ ನಿಲ್ದಾಣದ 100 ಮೀ. ಅಂತರದಲ್ಲಿ ಎಲ್ಲಿಯೂ ಮೀನು ಮಾರಾಟ ನಡೆಸದಂತೆಯೂ ಸೂಚಿಸಲಾಯಿತು. </p>.<p>ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪ್ರೀತಮ್, ಸಹಾಯಕ ಎಂಜಿನಿಯರ್ ದಾಸ್ ಪ್ರಕಾಶ್, ಉಳ್ಳಾಲ ನಗರಸಭೆ ಆಯುಕ್ತ ಸಂತೋಷ್, ಆರೋಗ್ಯ ಅಧಿಕಾರಿ ನವೀನ್ ಕುಮಾರ್, ಬೆಳ್ಮ ಅಭಿವೃದ್ಧಿ ಅಧಿಕಾರಿ ರಮೇಶ್, ಉಳ್ಳಾಲ, ಕೊಣಾಜೆ ಮತ್ತು ಸಿಎಆರ್ ಸಿಬ್ಬಂದಿ ಭಾಗಿಯಾಗಿದ್ದರು.</p>.<p>ಬೀದಿ ಬದಿ ಅಂಗಡಿಗಳಿಗೆ ಸ್ಥಳೀಯಾಡಳಿತದಿಂದ ಪರವಾನಗಿ ಪಡೆದುಕೊಳ್ಳುವುದು ಕಡ್ಡಾಯವಾಗಿದೆ. ತಳ್ಳುವ ಗಾಡಿಗಳಲ್ಲಿ ವ್ಯಾಪಾರ ನಡೆಸಲು ಅಡ್ಡಿಯಿಲ್ಲ. ಆದರೆ, ಸಂಬಂಧಿಸಿದ ಸ್ಥಳೀಯಾಡಳಿತ ಸಂಸ್ಥೆಯಿಂದ ಬೀದಿ ಬದಿ ವ್ಯಾಪಾರ ಪರವಾನಗಿ ಪಡೆದುಕೊಂಡಿರಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗದಂತೆ, ರಸ್ತೆ ಹಾಗೂ ಪಾದಚಾರಿ ಮಾರ್ಗಗಳನ್ನು ಆಕ್ರಮಿಸದೆ ವ್ಯಾಪಾರ ನಡೆಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>