<p><strong>ಮಂಗಳೂರು/ಉಡುಪಿ:</strong> ರಾಜ್ಯ ಸರ್ಕಾರ 2022ರಲ್ಲಿ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿದ ನಂತರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸರ್ಕಾರಿ ಹಾಗೂ ಅನುದಾನಿತ ಪದವಿ ಕಾಲೇಜುಗಳಲ್ಲಿ ಅಂದಾಜು 145 ಮುಸ್ಲಿಂ ವಿದ್ಯಾರ್ಥಿನಿಯರು ಶಿಕ್ಷಣವನ್ನು ಮೊಟಕುಗೊಳಿಸಿದ್ದರು.</p>.<p>ಈಗ ರಾಜ್ಯ ಸರ್ಕಾರದ ಹೊಸ ಆದೇಶದಿಂದಾಗಿ ಹಿಜಾಬ್ಗೆ ಅವಕಾಶ ದೊರೆತಿದ್ದು, ಈ ವಿದ್ಯಾರ್ಥಿನಿಯರು ಶಿಕ್ಷಣವನ್ನು ಮತ್ತೆ ಮುಂದುವರಿಸುತ್ತಾರೆಯೇ ಎಂಬ ಚರ್ಚೆ ನಡೆದಿದೆ.</p>.<p>‘ಈ ವಿವಾದದ ಸಂದರ್ಭದಲ್ಲಿ ಶಿಕ್ಷಣವನ್ನು ಮೊಟಕುಗೊಳಿಸಿದ್ದ ಮುಸ್ಲಿಂ ವಿದ್ಯಾರ್ಥಿನಿಯರ ಪೈಕಿ ಅರ್ಧದಷ್ಟು ವಿದ್ಯಾರ್ಥಿನಿಯರು ಮದುವೆಯಾಗಿದ್ದಾರೆ. ಅವರು ಈಗ ಶಿಕ್ಷಣ ಮುಂದುವರಿಸಲು ಸಾಧ್ಯ ವಾಗುವುದೋ ಇಲ್ಲವೋ ತಿಳಿಯದು’ ಎನ್ನುತ್ತಾರೆ ಕಾಲೇಜೊಂದರ ಪ್ರಾಂಶುಪಾಲರು.</p>.<p>‘ಕಾವೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ ಓದುತ್ತಿದ್ದ ಜಾಸ್ಮೀನ್, ಹಿಜಾಬ್ಗೆ ನಿರ್ಬಂಧ ಹೇರಿದ ನಂತರ ಶಿಕ್ಷಣ ತೊರೆದಿದ್ದಳು. ಆಕೆಗೆ ವರ್ಷದ ಹಿಂದೆ ವಿವಾಹವಾಗಿದೆ’ ಎಂದು ಜಾಸ್ಮೀನ್ ಅವರ ತಂದೆ ಕೆ.ಮೊಹಮ್ಮದ್ ಉಸ್ಮಾನ್ ತಿಳಿಸಿದರು.</p>.<p>‘ಈ ವಿವಾದದ ಕಾರಣಕ್ಕಾಗಿ ಕಾಲೇಜು ಬಿಟ್ಟಿರುವ ಅಮೀನಮ್ಮ ಕೂಡ ಶಿಕ್ಷಣ ಮುಂದುವರಿಸುವ ಸಾಧ್ಯತೆ ಕಡಿಮೆ. ಆಕೆಗೆ ಇನ್ನು ಕೆಲವು ವಾರಗಳಲ್ಲಿ ಮದುವೆಯಾಗಲಿದೆ’ ಎಂದು ಆಕೆಯ ತಾಯಿ ತಿಳಿಸಿದರು.</p>.<p>‘ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ ಹಿಜಾಬ್ ನಿಷೇಧದ ಕಾರಣಕ್ಕೆ ಶಿಕ್ಷಣವನ್ನು ಮೊಟಕುಗೊಳಿಸಿದ್ದ ಇತರ ಮುಸ್ಲಿಂ ವಿದ್ಯಾರ್ಥಿನಿಯರು, ಹಿಜಾಬ್ ಧರಿಸುವುದನ್ನು ಸಂಪೂರ್ಣವಾಗಿ ನಿಷೇಧಿಸದ ಖಾಸಗಿ ಕಾಲೇಜುಗಳಿಗೆ ದಾಖಲಾಗಿದ್ದರು’ ಎಂದು ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರಿಯಾಜ್ ಅಹ್ಮದ್ ತಿಳಿಸಿದರು.</p>.<p>‘2022ರ ಹಿಜಾಬ್ ನಿಷೇಧದ ಆದೇಶವನ್ನು ವಿದ್ಯಾರ್ಥಿಗಳಲ್ಲಿ ವಿಭಜನೆ ಸೃಷ್ಟಿಸುವ ಸಾಧನವಾಗಿ ಬಳಸಲಾಯಿತು’ ಎನ್ನುತ್ತಾರೆ ಮಂಗಳೂರಿನ ಪಿ. ದಯಾನಂದ ಪೈ - ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ರಾಜಶೇಖರ್ ಹೆಬ್ಬಾರ್. ಆ ಕಾಲೇಜಿನ 35 ವಿದ್ಯಾರ್ಥಿನಿಯರು ಶಿಕ್ಷಣ ಮೊಟಕುಗೊಳಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-51-1244175403</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು/ಉಡುಪಿ:</strong> ರಾಜ್ಯ ಸರ್ಕಾರ 2022ರಲ್ಲಿ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿದ ನಂತರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸರ್ಕಾರಿ ಹಾಗೂ ಅನುದಾನಿತ ಪದವಿ ಕಾಲೇಜುಗಳಲ್ಲಿ ಅಂದಾಜು 145 ಮುಸ್ಲಿಂ ವಿದ್ಯಾರ್ಥಿನಿಯರು ಶಿಕ್ಷಣವನ್ನು ಮೊಟಕುಗೊಳಿಸಿದ್ದರು.</p>.<p>ಈಗ ರಾಜ್ಯ ಸರ್ಕಾರದ ಹೊಸ ಆದೇಶದಿಂದಾಗಿ ಹಿಜಾಬ್ಗೆ ಅವಕಾಶ ದೊರೆತಿದ್ದು, ಈ ವಿದ್ಯಾರ್ಥಿನಿಯರು ಶಿಕ್ಷಣವನ್ನು ಮತ್ತೆ ಮುಂದುವರಿಸುತ್ತಾರೆಯೇ ಎಂಬ ಚರ್ಚೆ ನಡೆದಿದೆ.</p>.<p>‘ಈ ವಿವಾದದ ಸಂದರ್ಭದಲ್ಲಿ ಶಿಕ್ಷಣವನ್ನು ಮೊಟಕುಗೊಳಿಸಿದ್ದ ಮುಸ್ಲಿಂ ವಿದ್ಯಾರ್ಥಿನಿಯರ ಪೈಕಿ ಅರ್ಧದಷ್ಟು ವಿದ್ಯಾರ್ಥಿನಿಯರು ಮದುವೆಯಾಗಿದ್ದಾರೆ. ಅವರು ಈಗ ಶಿಕ್ಷಣ ಮುಂದುವರಿಸಲು ಸಾಧ್ಯ ವಾಗುವುದೋ ಇಲ್ಲವೋ ತಿಳಿಯದು’ ಎನ್ನುತ್ತಾರೆ ಕಾಲೇಜೊಂದರ ಪ್ರಾಂಶುಪಾಲರು.</p>.<p>‘ಕಾವೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ ಓದುತ್ತಿದ್ದ ಜಾಸ್ಮೀನ್, ಹಿಜಾಬ್ಗೆ ನಿರ್ಬಂಧ ಹೇರಿದ ನಂತರ ಶಿಕ್ಷಣ ತೊರೆದಿದ್ದಳು. ಆಕೆಗೆ ವರ್ಷದ ಹಿಂದೆ ವಿವಾಹವಾಗಿದೆ’ ಎಂದು ಜಾಸ್ಮೀನ್ ಅವರ ತಂದೆ ಕೆ.ಮೊಹಮ್ಮದ್ ಉಸ್ಮಾನ್ ತಿಳಿಸಿದರು.</p>.<p>‘ಈ ವಿವಾದದ ಕಾರಣಕ್ಕಾಗಿ ಕಾಲೇಜು ಬಿಟ್ಟಿರುವ ಅಮೀನಮ್ಮ ಕೂಡ ಶಿಕ್ಷಣ ಮುಂದುವರಿಸುವ ಸಾಧ್ಯತೆ ಕಡಿಮೆ. ಆಕೆಗೆ ಇನ್ನು ಕೆಲವು ವಾರಗಳಲ್ಲಿ ಮದುವೆಯಾಗಲಿದೆ’ ಎಂದು ಆಕೆಯ ತಾಯಿ ತಿಳಿಸಿದರು.</p>.<p>‘ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ ಹಿಜಾಬ್ ನಿಷೇಧದ ಕಾರಣಕ್ಕೆ ಶಿಕ್ಷಣವನ್ನು ಮೊಟಕುಗೊಳಿಸಿದ್ದ ಇತರ ಮುಸ್ಲಿಂ ವಿದ್ಯಾರ್ಥಿನಿಯರು, ಹಿಜಾಬ್ ಧರಿಸುವುದನ್ನು ಸಂಪೂರ್ಣವಾಗಿ ನಿಷೇಧಿಸದ ಖಾಸಗಿ ಕಾಲೇಜುಗಳಿಗೆ ದಾಖಲಾಗಿದ್ದರು’ ಎಂದು ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರಿಯಾಜ್ ಅಹ್ಮದ್ ತಿಳಿಸಿದರು.</p>.<p>‘2022ರ ಹಿಜಾಬ್ ನಿಷೇಧದ ಆದೇಶವನ್ನು ವಿದ್ಯಾರ್ಥಿಗಳಲ್ಲಿ ವಿಭಜನೆ ಸೃಷ್ಟಿಸುವ ಸಾಧನವಾಗಿ ಬಳಸಲಾಯಿತು’ ಎನ್ನುತ್ತಾರೆ ಮಂಗಳೂರಿನ ಪಿ. ದಯಾನಂದ ಪೈ - ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ರಾಜಶೇಖರ್ ಹೆಬ್ಬಾರ್. ಆ ಕಾಲೇಜಿನ 35 ವಿದ್ಯಾರ್ಥಿನಿಯರು ಶಿಕ್ಷಣ ಮೊಟಕುಗೊಳಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-51-1244175403</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>