<p><strong>ಮಂಗಳೂರು</strong>: ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್ ನೀಡಿರುವ ತೀರ್ಪನ್ನು ವಿರೋಧಿಸಿ ಮುಸ್ಲಿಂ ಒಕ್ಕೂಟಗಳು ಗುರುವಾರ ಕರೆ ನೀಡಿರುವ ಬಂದ್ ಬೆಂಬಲಿಸಿ ನಗರದಲ್ಲಿ ಮುಸ್ಲಿಂ ಮಾಲೀಕತ್ವದ ಹಲವು ಅಂಗಡಿ, ಮಳಿಗೆಗಳು ಬಾಗಿಲು ಮುಚ್ಚಿವೆ.</p>.<p>ಸೆಂಟ್ರಲ್ ಮಾರ್ಕೆಟ್, ಸ್ಟೇಟ್ ಬ್ಯಾಂಕ್ ರೋಡ್, ದಕ್ಕೆಯಲ್ಲಿರುವ ಮುಸ್ಲಿಂ ಸಮುದಾಯದವರ ಹಲವು ಅಂಗಡಿಗಳು ವ್ಯವಹಾರ ಚಟುವಟಿಯನ್ನು ಸ್ಥಗಿತಗೊಳಿಸಿವೆ. ಕೆಲ ರಸ್ತೆ ಬದಿ ವ್ಯಾಪಾರಿಗಳು ಸಹ ಬಂದ್ ಕಾರಣಕ್ಕೆ ವ್ಯಾಪಾರ ನಡೆಸುತ್ತಿಲ್ಲ.</p>.<p>ಅಮೀರ್-ಇ-ಶರಿಯತ್ ಕರೆ ನೀಡಿರುವ ಬಂದ್ ಗೆ ಕರಾವಳಿಯ ಬಹುತೇಕ ಮುಸ್ಲಿಂ ಸಂಘಟನೆಗಳು ಬೆಂಬಲ ನೀಡಿವೆ. </p>.<p>ದಕ್ಕೆಯಲ್ಲಿ ಮೀನುಗಾರಿಕಾ ಚಟುವಟಿಕೆ ಬಹುತೇಕ ಸ್ತಬ್ಧಗೊಂಡಿದೆ.</p>.<p>ಬಂದ್ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದ್ದು, ಎಲ್ಲೆಡೆ ಪೊಲೀಸರು ನಿಂತು ನಿಗಾವಹಿಸುತ್ತಿದ್ದಾರೆ.</p>.<p>ಜಿಲ್ಲೆಯ ಪುತ್ತೂರು, ಬಂಟ್ವಾಳ ತಾಲ್ಲೂಕು ಹಾಗೂ ಇನ್ನಿತರ ಗ್ರಾಮೀಣ ಪ್ರದೇಶಗಳಲ್ಲೂ ಮುಸ್ಲಿಂ ಸಮುದಾಯದವರ ಮಾಲೀಕತ್ವದ ಅಂಗಡಿ, ಹೋಟೆಲ್ ಗಳು ಬಂದ್ ಗೆ ಸ್ಪಂದಿಸಿ, ಬಾಗಿಲು ಮುಚ್ಚಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್ ನೀಡಿರುವ ತೀರ್ಪನ್ನು ವಿರೋಧಿಸಿ ಮುಸ್ಲಿಂ ಒಕ್ಕೂಟಗಳು ಗುರುವಾರ ಕರೆ ನೀಡಿರುವ ಬಂದ್ ಬೆಂಬಲಿಸಿ ನಗರದಲ್ಲಿ ಮುಸ್ಲಿಂ ಮಾಲೀಕತ್ವದ ಹಲವು ಅಂಗಡಿ, ಮಳಿಗೆಗಳು ಬಾಗಿಲು ಮುಚ್ಚಿವೆ.</p>.<p>ಸೆಂಟ್ರಲ್ ಮಾರ್ಕೆಟ್, ಸ್ಟೇಟ್ ಬ್ಯಾಂಕ್ ರೋಡ್, ದಕ್ಕೆಯಲ್ಲಿರುವ ಮುಸ್ಲಿಂ ಸಮುದಾಯದವರ ಹಲವು ಅಂಗಡಿಗಳು ವ್ಯವಹಾರ ಚಟುವಟಿಯನ್ನು ಸ್ಥಗಿತಗೊಳಿಸಿವೆ. ಕೆಲ ರಸ್ತೆ ಬದಿ ವ್ಯಾಪಾರಿಗಳು ಸಹ ಬಂದ್ ಕಾರಣಕ್ಕೆ ವ್ಯಾಪಾರ ನಡೆಸುತ್ತಿಲ್ಲ.</p>.<p>ಅಮೀರ್-ಇ-ಶರಿಯತ್ ಕರೆ ನೀಡಿರುವ ಬಂದ್ ಗೆ ಕರಾವಳಿಯ ಬಹುತೇಕ ಮುಸ್ಲಿಂ ಸಂಘಟನೆಗಳು ಬೆಂಬಲ ನೀಡಿವೆ. </p>.<p>ದಕ್ಕೆಯಲ್ಲಿ ಮೀನುಗಾರಿಕಾ ಚಟುವಟಿಕೆ ಬಹುತೇಕ ಸ್ತಬ್ಧಗೊಂಡಿದೆ.</p>.<p>ಬಂದ್ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದ್ದು, ಎಲ್ಲೆಡೆ ಪೊಲೀಸರು ನಿಂತು ನಿಗಾವಹಿಸುತ್ತಿದ್ದಾರೆ.</p>.<p>ಜಿಲ್ಲೆಯ ಪುತ್ತೂರು, ಬಂಟ್ವಾಳ ತಾಲ್ಲೂಕು ಹಾಗೂ ಇನ್ನಿತರ ಗ್ರಾಮೀಣ ಪ್ರದೇಶಗಳಲ್ಲೂ ಮುಸ್ಲಿಂ ಸಮುದಾಯದವರ ಮಾಲೀಕತ್ವದ ಅಂಗಡಿ, ಹೋಟೆಲ್ ಗಳು ಬಂದ್ ಗೆ ಸ್ಪಂದಿಸಿ, ಬಾಗಿಲು ಮುಚ್ಚಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>