ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿಂದೂ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಧರ್ಮೇಂದ್ರ ಅಮೀನ್ ಹಾಗೂ ಅಭಿನವ ಭಾರತದ ಬೆಳ್ತಂಗಡಿ ತಾಲ್ಲೂಕು ಘಟಕದ ಅಧ್ಯಕ್ಷ ಪುನೀತ್ ಸುವರ್ಣ, ‘ಬಿಜೆಪಿಯ ನಕಲಿ ಹಿಂದುತ್ವದ ವಿರುದ್ಧ ನಾವು ಹೋರಾಟ ನಡೆಸುತ್ತಲೇ ಇದ್ದೇವೆ. ಪ್ರಸ್ತುತ ಬಿಜೆಪಿಗರಿಗೆ ನೈತಿಕತೆಯೇ ಉಳಿದಿಲ್ಲ. ಹಿಂದೂ ಕಾರ್ಯಕರ್ತರ ಮೇಲೆ ಪುತ್ತೂರಿನಲ್ಲಿ ನಡೆದ ಪೊಲೀಸ್ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ನಳಿನ್ ಕುಮಾರ್ ಕಟೀಲ್ ತಕ್ಷಣರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದರು.