‘ಜಯಂತ್ ಅವರು ತೊಕ್ಕೊಟ್ಟಿನಲ್ಲಿ ಆಟೊರಿಕ್ಷಾ ಓಡಿಸಿ ಜೀವನ ಸಾಗಿಸುತ್ತಿದ್ದರು. ಕುಂಪಲದ ಹನುಮಾನ್ ನಗರದಲ್ಲಿ ಹೊಸ ಮನೆಯನ್ನು ಕಟ್ಟಿಸುತ್ತಿದ್ದ ಅವರು ಆರ್ಥಿಕ ಸಂಕಷ್ಟವನ್ನೂ ಎದುರಿಸುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿನಲ್ಲಿ ಭಾಗವಹಿಸಿದ್ದ ಸಾರ್ವಜನಿಕ ಸಮಾವೇಶದಲ್ಲಿ ಶುಕ್ರವಾರ ಪಾಲ್ಗೊಂಡಿದ್ದರು. ಕಾರ್ಯಕ್ರಮದಿಂದ ಮರಳುವಾಗ ಅವರ ಮೊಬೈಲ್ ಫೋನನ್ನು ಕಳೆದುಕೊಂಡಿದ್ದರು. ಹೊಸ ಫೋನ್ ಖರೀದಿಸಲು ₹ 5 ಸಾವಿರ ಸಾಲ ನೀಡುವಂತೆ ಗೆಳೆಯರನ್ನು ಕೋರಿದ್ದರು. ಈ ವಿಚಾರವಾಗಿ ಬೇಸರಗೊಂಡಿದ್ದರು. ಪತ್ನಿ ಮನೆಗೆ ಮರಳಿದಾಗ ಜಯಂತ್ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ’ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.