ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂದಿಯಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾಗೆ ವಿಶೇಷ ಆತಿಥ್ಯ ನೀಡಲು ₹ 2 ಕೋಟಿ ಲಂಚ ಪಡೆದಿದ್ದಾರೆ ಎನ್ನಲಾದ ಆರೋಪಕ್ಕೆ ಎದುರಿಸುತ್ತಿರುವ ಕಾರಾಗೃಹಗಳ ಇಲಾಖೆಯ ನಿವೃತ್ತ ಡಿಜಿಪಿ ಎಚ್.ಎನ್. ಸತ್ಯನಾರಾಯಣರಾವ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶನಿವಾರ ಎಫ್ಐಆರ್ ದಾಖಲಿಸಿದೆ.