ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ: ಕೆಲವೆಡೆ ಶಾಲೆಗಳಿಗೆ ರಜೆ ಘೋಷಣೆ

ಅಕ್ಷರ ಗಾತ್ರ

ಮಂಗಳೂರು: ಭಾರಿ ಮಳೆ ಕಾರಣ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಾಗೂ ಉಲ್ಲಾಳ, ಮುಲ್ಕಿ, ಬಂಟ್ವಾಳ, ಮೂಡುಬಿದಿರೆ ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು (ಜುಲೈ 30) ರಜೆ ಘೋಷಿಸಲಾಗಿದೆ.

ಪುತ್ತೂರು ಕಂದಾಯ ಉಪ ವಿಭಾಗ ವ್ಯಾಪ್ತಿಯಲ್ಲಿ ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಕೈಗೊಳ್ಳುವಂತೆ ಆಯಾ ತಹಶೀಲ್ದಾರರು, ಬಿಇಒಗಳಿಗೆ ಸೂಚಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಪಾಂಡೇಶ್ವರ ಶಿವನಗರ ಭಾಗದಲ್ಲಿ ಮನೆಗಳು ಜಲಾವೃತಗೊಂಡಿವೆ.

ಪುತ್ತೂರು: ಉಪವಿಭಾಗದ ಶಾಲೆಗಳಿಗೂ ರಜೆ
ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದಲ್ಲೂ ಶುಕ್ರವಾರ ರಾತ್ರಿ ವಿಪರೀತ ಮಳೆಯಾದ ಕಾರಣ ಶಾಲೆಗಳಿಗೆ ಉಪವಿಭಾಗಾಧಿಕಾರಿ ರಜೆ ಘೋಷಿಸಿದ್ದಾರೆ.ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.

ಮಂಗಳೂರಿನಲ್ಲಿ ಭಾರಿ ಮಳೆ ಮುಂದುವರಿದಿದ್ದು ಪಾಂಡೇಶ್ವರ ಶಿವನಗರ ಭಾಗದಲ್ಲಿ ಮನೆಗಳು ಜಲಾವೃತಗೊಂಡಿವೆ. ಮನೆಯಲ್ಲಿ ಇರುವ ಜನರು ಕೂಡ ಸುರಕ್ಷಿತ ಸ್ಥಳಗಳಿಗೆ ತೆರಳಲು ಕಷ್ಟದ ಪರಿಸ್ಥಿತಿ ನಿರ್ಮಾಣವಾಗಿದೆ.

ಪಂಪ್ವೆಲ್ ವೃತ್ತವೂ ಜಲಾವೃತವಾಗಿದ್ದು ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಯಿತು.ಮಂಗಳೂ ಸೆಂಟ್ರಲ್‌ ರೈಲು ನಿಲ್ದಾಣದ ಬಳಿಯ ಕೆಲ ಪ್ರದೇಶಗಳು ಜಲಾವೃತವಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT