ವಿಎಚ್ಪಿ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್, ‘ಮಂದಿರದಲ್ಲಿ ರಾಮ ದೇವರ ವಿಗ್ರಹ ಪ್ರತಿಷ್ಠಾಪನೆಯ ದಿನ ಪ್ರತಿ ಊರು ಅಯೋಧ್ಯೆಯಂತಾಗಬೇಕು. ಪ್ರತಿ ಮನೆಯಲ್ಲೂ ಕನಿಷ್ಠ ಐದು ದೀಪಗಳನ್ನು ಬೆಳಗಿ, ಉತ್ತರ ದಿಕ್ಕಿಗೆ ಆರತಿ ಎತ್ತಿ ದೀಪಾವಳಿಯ ರೀತಿ ಹಬ್ಬವನ್ನು ಆಚರಿಸಬೇಕು. ಅಂದು ಜಿಲ್ಲೆಯ ದೇವಸ್ಥಾನ ಮತ್ತು ದೈವಸ್ಥಾನಗಳಲ್ಲಿ ವಿಶೇಷ ಪೂಜೆ, ಶ್ರೀ ರಾಮ ತಾರಕಮಂತ್ರ ಜಪ, ಹನುಮಾನ್ ಚಾಲೀಸಾ ಪಠಣ, ಭಜನೆ, ಕೀರ್ತನೆ, ಸುಂದರ ಕಾಂಡ ಪಾರಾಯಣ, ರಾಮರಕ್ಷಾ ಸ್ತೋತ್ರದ ಪಠಣ, ಇಷ್ಟ ದೇವರ ಜಪ ಮತ್ತು ಪ್ರಸಾದ ವಿತರಣೆ ನಡೆಯಲಿದೆ' ಎಂದರು.