ಮಂಗಳೂರು ತಾಲ್ಲೂಕಿನ ಸಮುದ್ರ ಕಿನಾರೆಗಳಾದ ಸೋಮೇಶ್ವರ, ಉಳ್ಳಾಲ, ಮೊಗವೀರ ಪಟ್ನ, ಪಣಂಬೂರು, ತಣ್ಣೀರುಬಾವಿ, ಸಸಿಹಿತ್ಲು, ಸುರತ್ಕಲ್ ಮತ್ತು ಫಾತಿಮಾ ಬೀಚ್ಗಳಲ್ಲಿ ತಲಾ ಇಬ್ಬರು ಗೃಹರಕ್ಷಕರನ್ನು ನಿಯೋಜಿಸಲಾಗುವುದು. ನೆರೆ ಕಾಣಿಸಿಕೊಳ್ಳಬಹುದಾದ ಉಪ್ಪಿನಂಗಡಿ, ಬೆಳ್ತಂಗಡಿ, ಸುಳ್ಯ, ಬಂಟ್ವಾಳ, ಮೂಲ್ಕಿ, ಕಡಬ ಪ್ರದೇಶಗಳಲ್ಲಿ ಗೃಹರಕ್ಷಕರು ಸನ್ನದ್ದರಾಗಿರಬೇಕು ಎಂದು ಸೂಚಿಸಿದ ಅವರು ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಜಿಲ್ಲೆಯಾದ್ಯಂತ 60 ಗೃಹರಕ್ಷಕರನ್ನು ಒಳಗೊಂಡ ಪ್ರವಾಹ ರಕ್ಷಣಾ ತಂಡ ರಚಿಸಲಾಗುವುದು ಎಂದರು.