ನರಿಂಗಾನ ಗ್ರಾಮದ ಬೋಳ ನಿವಾಸಿ ರಾಬರ್ಟ್ ಕುಟಿನ್ಹೊ ಬಾವಿಗಿಳಿದು ಪಾರಾದ ವೃದ್ಧ. ಅವರ ಮಗ ರಾಯಲ್ ಕುಟಿನ್ಹೊ (39) ಹೆಜ್ಜೇನು ದಾಳಿಯಿಂದ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ದಾಖಲಾಗಿದ್ದಾರೆ. ರಾಯಲ್ ಅವರ ಸಹೋದರ ಜೋಸೆಫ್ ಕುಟಿನ್ಹೊ ಅವರಿಗೂ ಗಾಯಗಳಾಗಿದ್ದು, ಅವರು ಚೇತರಿಸಿಕೊಂಡಿದ್ದಾರೆ. ಜೋಸೆಫ್ ಕುಟಿನ್ಹೊ ಅವರ ಮಗ ಅಖಿಲ್ ಅವರಿಗೂ ಹೆಜ್ಜೇನುಗಳು ಕಡಿದಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.