<p><strong>ಪುತ್ತೂರು:</strong> ಹನಿಟ್ರ್ಯಾಪ್ಗೆ ಒಳಗಾಗಿ ಸುಮಾರು ₹ 30 ಲಕ್ಷ ಕಳೆದುಕೊಂಡಿರುವುದಾಗಿ ನೆಟ್ಟಣಿಗೆ ಮುಡ್ನೂರಿನ ಯುವಕನೊಬ್ಬ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ 7 ಮಂದಿ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವತಿಯನ್ನು ಬಂಧಿಸಲಾಗಿದೆ.</p>.<p>ಮುಡ್ನೂರು ಗ್ರಾಮದ ಚೀಚಗದ್ದೆ ನಿವಾಸಿ, ವೃತ್ತಿಯಲ್ಲಿ ಸೇಲ್ಸ್ಮ್ಯಾನ್ ಆಗಿರುವ ಅಬ್ದುಲ್ ನಾಸಿರ್ (25) ಹನಿಟ್ರ್ಯಾಪ್ಗೆ ಒಳಗಾದ ಯುವಕ.</p>.<p>ಮುಡ್ನೂರು ಚೀಚಗದ್ದೆಯ ಹನೀಫ್ ಯಾನೆ ಕೆಎಂವೈ ಹನೀಫ್, ಕೊಟ್ಯಾಡಿಯ ಮುಹಮ್ಮದ್ ಕುಂಞಿ, ಕೊಟ್ಯಾಡಿಯ ಶಾಫಿ, ಸವಣೂರಿನ ಅಝರ್, ಸಯೀದ್ ಮೋನು, ನಾಸಿರ್ ಮತ್ತು ಕಾರ್ಕಳದವಳೆಂದು ಪರಿಚಯಿಸಿಕೊಂಡಿದ್ದ ತನೀಶಾ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ.</p>.<p>ಹನಿಟ್ರ್ಯಾಪ್ ಜಾಲದ ತಂಡ ಏಪ್ರಿಲ್ ತಿಂಗಳಿನಲ್ಲಿ ಅಬ್ದುಲ್ ನಾಸೀರ್ ಅವರನ್ನು ಮೋಸದ ಬಲೆಗೆ ಸಿಲುಕಿಸಿ, ಹಣ ವಸೂಲಿ ಮಾಡಿತ್ತು. ಈ ಕುರಿತು ಅವರು ಪೊಲೀಸ್ ಮೇಲಧಿಕಾರಿಗಳಿಗೆ ದೂರು ನೀಡಿದ್ದರು. ಇದೀಗ ಮೇಲಧಿಕಾರಿಗಳ ಸೂಚನೆಯಂತೆ ಪ್ರಕರಣ ದಾಖಲಾಗಿದೆ.</p>.<p>‘ಆರೋಪಿಗಳು ತನ್ನಿಂದ ಹಣ ವಸೂಲಿ ಮಾಡುವ ಉದ್ದೇಶದಿಂದ ಒಳಸಂಚು ರೂಪಿಸಿ, ಯುವತಿಯನ್ನು ಬಳಸಿಕೊಂಡು ತನ್ನ ನಗ್ನ ವಿಡಿಯೊವನ್ನು ಚಿತ್ರೀಕರಿಸಿದ್ದಾರೆ. ಬಳಿಕ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವ ಹಾಗೂ ಜೀವ ಬೆದರಿಕೆಯೊಡ್ಡುವ ಮೂಲಕ ಬಲಾತ್ಕಾರವಾಗಿ ಹಣ ವಸೂಲಿ ಮಾಡಿದ್ದಾರೆ. ಈಗಾಗಲೇ ₹ 30 ಲಕ್ಷ ನೀಡಿದ್ದರೂ ಈ ವಿಡಿಯೊವನ್ನು ಮುಂದಿಟ್ಟುಕೊಂಡು ಇನ್ನಷ್ಟೂ ಹಣಕ್ಕೆ ಬೇಡಿಕೆ ಇಡುವ ಸಾಧ್ಯತೆ ಇದೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ದೂರಿನಲ್ಲಿ ಅಬ್ದುಲ್ ನಾಸಿರ್ ತಿಳಿಸಿದ್ದಾರೆ.</p>.<p>ಪ್ರಕರಣದ ತನಿಖೆ ಕೈಗೆತ್ತಿಗೊಂಡಿರುವ ಡಿವೈಎಸ್ಪಿ ಡಾ.ಗಾನ ಪಿ.ಕುಮಾರ್ ನೇತೃತ್ವದ ಪೊಲೀಸರು ಆರೋಪಿಗಳ ಪೈಕಿ ಮಂಗಳೂರಿನ ತನೀಶಾ ಎಂಬಾಕೆಯನ್ನು ಬಂಧಿಸಿದ್ದಾರೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆಕೆಗೆ ಮಧ್ಯಂತರ ಜಾಮೀನು ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು:</strong> ಹನಿಟ್ರ್ಯಾಪ್ಗೆ ಒಳಗಾಗಿ ಸುಮಾರು ₹ 30 ಲಕ್ಷ ಕಳೆದುಕೊಂಡಿರುವುದಾಗಿ ನೆಟ್ಟಣಿಗೆ ಮುಡ್ನೂರಿನ ಯುವಕನೊಬ್ಬ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ 7 ಮಂದಿ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವತಿಯನ್ನು ಬಂಧಿಸಲಾಗಿದೆ.</p>.<p>ಮುಡ್ನೂರು ಗ್ರಾಮದ ಚೀಚಗದ್ದೆ ನಿವಾಸಿ, ವೃತ್ತಿಯಲ್ಲಿ ಸೇಲ್ಸ್ಮ್ಯಾನ್ ಆಗಿರುವ ಅಬ್ದುಲ್ ನಾಸಿರ್ (25) ಹನಿಟ್ರ್ಯಾಪ್ಗೆ ಒಳಗಾದ ಯುವಕ.</p>.<p>ಮುಡ್ನೂರು ಚೀಚಗದ್ದೆಯ ಹನೀಫ್ ಯಾನೆ ಕೆಎಂವೈ ಹನೀಫ್, ಕೊಟ್ಯಾಡಿಯ ಮುಹಮ್ಮದ್ ಕುಂಞಿ, ಕೊಟ್ಯಾಡಿಯ ಶಾಫಿ, ಸವಣೂರಿನ ಅಝರ್, ಸಯೀದ್ ಮೋನು, ನಾಸಿರ್ ಮತ್ತು ಕಾರ್ಕಳದವಳೆಂದು ಪರಿಚಯಿಸಿಕೊಂಡಿದ್ದ ತನೀಶಾ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ.</p>.<p>ಹನಿಟ್ರ್ಯಾಪ್ ಜಾಲದ ತಂಡ ಏಪ್ರಿಲ್ ತಿಂಗಳಿನಲ್ಲಿ ಅಬ್ದುಲ್ ನಾಸೀರ್ ಅವರನ್ನು ಮೋಸದ ಬಲೆಗೆ ಸಿಲುಕಿಸಿ, ಹಣ ವಸೂಲಿ ಮಾಡಿತ್ತು. ಈ ಕುರಿತು ಅವರು ಪೊಲೀಸ್ ಮೇಲಧಿಕಾರಿಗಳಿಗೆ ದೂರು ನೀಡಿದ್ದರು. ಇದೀಗ ಮೇಲಧಿಕಾರಿಗಳ ಸೂಚನೆಯಂತೆ ಪ್ರಕರಣ ದಾಖಲಾಗಿದೆ.</p>.<p>‘ಆರೋಪಿಗಳು ತನ್ನಿಂದ ಹಣ ವಸೂಲಿ ಮಾಡುವ ಉದ್ದೇಶದಿಂದ ಒಳಸಂಚು ರೂಪಿಸಿ, ಯುವತಿಯನ್ನು ಬಳಸಿಕೊಂಡು ತನ್ನ ನಗ್ನ ವಿಡಿಯೊವನ್ನು ಚಿತ್ರೀಕರಿಸಿದ್ದಾರೆ. ಬಳಿಕ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವ ಹಾಗೂ ಜೀವ ಬೆದರಿಕೆಯೊಡ್ಡುವ ಮೂಲಕ ಬಲಾತ್ಕಾರವಾಗಿ ಹಣ ವಸೂಲಿ ಮಾಡಿದ್ದಾರೆ. ಈಗಾಗಲೇ ₹ 30 ಲಕ್ಷ ನೀಡಿದ್ದರೂ ಈ ವಿಡಿಯೊವನ್ನು ಮುಂದಿಟ್ಟುಕೊಂಡು ಇನ್ನಷ್ಟೂ ಹಣಕ್ಕೆ ಬೇಡಿಕೆ ಇಡುವ ಸಾಧ್ಯತೆ ಇದೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ದೂರಿನಲ್ಲಿ ಅಬ್ದುಲ್ ನಾಸಿರ್ ತಿಳಿಸಿದ್ದಾರೆ.</p>.<p>ಪ್ರಕರಣದ ತನಿಖೆ ಕೈಗೆತ್ತಿಗೊಂಡಿರುವ ಡಿವೈಎಸ್ಪಿ ಡಾ.ಗಾನ ಪಿ.ಕುಮಾರ್ ನೇತೃತ್ವದ ಪೊಲೀಸರು ಆರೋಪಿಗಳ ಪೈಕಿ ಮಂಗಳೂರಿನ ತನೀಶಾ ಎಂಬಾಕೆಯನ್ನು ಬಂಧಿಸಿದ್ದಾರೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆಕೆಗೆ ಮಧ್ಯಂತರ ಜಾಮೀನು ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>