<p><strong>ಉಜಿರೆ</strong>: ಸದಾಚಾರ, ಉತ್ತಮ ಚಿಂತನೆಯೊಂದಿಗೆ ಮನೆಯೇ ಮಂದಿರವಾದಾಗ ಶಾಂತಿ, ನೆಮ್ಮದಿಯ ಜೀವನ ಸಾಧ್ಯ ಎಂದು ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಹೇಳಿದರು.</p>.<p>ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಬೆಳ್ತಂಗಡಿ ತಾಲ್ಲೂಕು ಘಟಕದ ಆಶ್ರಯದಲ್ಲಿ ಭಾನುವಾರ ಧರ್ಮಸ್ಥಳದಲ್ಲಿ ಗಾಂಧಿ ಜಯಂತಿ ಆಚರಣೆಯ ಅಂಗವಾಗಿ ಆಯೋಜಿಸಿದ್ದ ನವಜೀವನ ಸದಸ್ಯರ ಸಮಾವೇಶ ಮತ್ತು ಕೇಂದ್ರ ಒಕ್ಕೂಟಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ನಮ್ಮ ಪಂಚೇಂದ್ರಿಯಗಳ ನಿಯಂತ್ರಣಕ್ಕೆ ವಿಧಿಸಿರುವ ಕೆಲವು ವಿಧಿ- ನಿಯಮಗಳು, ನಿಷೇಧಗಳು ಧರ್ಮದ ಪ್ರತೀಕವಾಗಿವೆ. ಅವುಗಳನ್ನು ದೃಢಸಂಕಲ್ಪದಿಂದ ಪಾಲಿಸಿದಾಗ ಜೀವನ ಪಾವನವಾಗುತ್ತದೆ ಎಂದರು.</p>.<p>ಮದ್ಯದ ದಾಸರಾದಾಗ ದೇಹದ ಒಂದೊಂದು ಅಂಗ ನಿಷ್ಕ್ರಿಯವಾಗಿ, ಕ್ಷುಲ್ಲಕ ಜೀವನ ನಡೆಸಬೇಕಾಗುತ್ತದೆ. ತಾತ್ಕಾಲಿಕ ಸಂತೋಷದ ಭ್ರಮೆಯನ್ನು ಬಿಟ್ಟು, ಸಂಕಲ್ಪ ಶಕ್ತಿಯಿಂದ ಮದ್ಯ ವರ್ಜಿಸಿ ವ್ಯಸನಮುಕ್ತರಾಗಿ. ಈ ನಿಟ್ಟಿನಲ್ಲಿ ನವಜೀವನ ಸಮಿತಿ ಸದಸ್ಯರ ಸಂಕಲ್ಪ ಶ್ಲಾಘನೀಯ ಎಂದರು.</p>.<p>ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ಅಹಿಂಸಾ ಮಾರ್ಗದಿಂದ ಸಮಾಜ ಸಂಘಟನೆಯೊಂದಿಗೆ ಗಾಂಧೀಜಿ ನೇತೃತ್ವದಲ್ಲಿ ಗಳಿಸಿದ ಸ್ವಾತಂತ್ರ್ಯವನ್ನು ರಕ್ಷಿಸಿ, ಬೆಳೆಸುವುದು ನಮ್ಮೆಲ್ಲರ ಹೊಣೆಗಾರಿಕೆ. ಅವರ ಕನಸನ್ನು ನನಸು ಮಾಡಿ, ದೇಶದ ಉಜ್ವಲ ಭವಿಷ್ಯವನ್ನು ರೂಪಿಸಬೇಕು ಎಂದರು.</p>.<p>ಗ್ರಾಮಾಭಿವೃದ್ಧಿ ಯೋಜನೆ ಫಲಾನು<br />ಭವಿಗಳು ₹84 ಸಾವಿರ ಕೋಟಿ ವ್ಯವಹಾರ ನಡೆಸಿ, ₹3 ಸಾವಿರ ಕೋಟಿ ಉಳಿತಾಯ ಮಾಡಿದ್ದಾರೆ ಎಂದು ಅವರು ಹೇಳಿದರು.</p>.<p>ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಮೂಡು<br />ಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಮಾತನಾಡಿದರು.</p>.<p>ಶ್ರದ್ಧಾ ಅಮಿತ್, ಡಾ. ಮೈತ್ರಿ, ಸಂಪತ್ ಸಾಮ್ರಾಜ್ಯ, ಅನಿಲ್ ಕುಮಾರ್, ಆರ್.ಬಿ. ಹೆಬ್ಬಳ್ಳಿ, ವಿವೇಕ್ ಪಾಯಸ್, ವಸಂತ ಸಾಲ್ಯಾನ್ ಇದ್ದರು.</p>.<p>ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಸ್ವಾಗತಿಸಿದರು. ಯೋಜನಾಧಿಕಾರಿ ಸುರೇಂದ್ರ ಕುಮಾರ್ ಧನ್ಯವಾದವಿತ್ತರು. ಯಶವಂತ್ ಮತ್ತು ತಿಮ್ಮಯ್ಯ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ</strong>: ಸದಾಚಾರ, ಉತ್ತಮ ಚಿಂತನೆಯೊಂದಿಗೆ ಮನೆಯೇ ಮಂದಿರವಾದಾಗ ಶಾಂತಿ, ನೆಮ್ಮದಿಯ ಜೀವನ ಸಾಧ್ಯ ಎಂದು ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಹೇಳಿದರು.</p>.<p>ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಬೆಳ್ತಂಗಡಿ ತಾಲ್ಲೂಕು ಘಟಕದ ಆಶ್ರಯದಲ್ಲಿ ಭಾನುವಾರ ಧರ್ಮಸ್ಥಳದಲ್ಲಿ ಗಾಂಧಿ ಜಯಂತಿ ಆಚರಣೆಯ ಅಂಗವಾಗಿ ಆಯೋಜಿಸಿದ್ದ ನವಜೀವನ ಸದಸ್ಯರ ಸಮಾವೇಶ ಮತ್ತು ಕೇಂದ್ರ ಒಕ್ಕೂಟಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ನಮ್ಮ ಪಂಚೇಂದ್ರಿಯಗಳ ನಿಯಂತ್ರಣಕ್ಕೆ ವಿಧಿಸಿರುವ ಕೆಲವು ವಿಧಿ- ನಿಯಮಗಳು, ನಿಷೇಧಗಳು ಧರ್ಮದ ಪ್ರತೀಕವಾಗಿವೆ. ಅವುಗಳನ್ನು ದೃಢಸಂಕಲ್ಪದಿಂದ ಪಾಲಿಸಿದಾಗ ಜೀವನ ಪಾವನವಾಗುತ್ತದೆ ಎಂದರು.</p>.<p>ಮದ್ಯದ ದಾಸರಾದಾಗ ದೇಹದ ಒಂದೊಂದು ಅಂಗ ನಿಷ್ಕ್ರಿಯವಾಗಿ, ಕ್ಷುಲ್ಲಕ ಜೀವನ ನಡೆಸಬೇಕಾಗುತ್ತದೆ. ತಾತ್ಕಾಲಿಕ ಸಂತೋಷದ ಭ್ರಮೆಯನ್ನು ಬಿಟ್ಟು, ಸಂಕಲ್ಪ ಶಕ್ತಿಯಿಂದ ಮದ್ಯ ವರ್ಜಿಸಿ ವ್ಯಸನಮುಕ್ತರಾಗಿ. ಈ ನಿಟ್ಟಿನಲ್ಲಿ ನವಜೀವನ ಸಮಿತಿ ಸದಸ್ಯರ ಸಂಕಲ್ಪ ಶ್ಲಾಘನೀಯ ಎಂದರು.</p>.<p>ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ಅಹಿಂಸಾ ಮಾರ್ಗದಿಂದ ಸಮಾಜ ಸಂಘಟನೆಯೊಂದಿಗೆ ಗಾಂಧೀಜಿ ನೇತೃತ್ವದಲ್ಲಿ ಗಳಿಸಿದ ಸ್ವಾತಂತ್ರ್ಯವನ್ನು ರಕ್ಷಿಸಿ, ಬೆಳೆಸುವುದು ನಮ್ಮೆಲ್ಲರ ಹೊಣೆಗಾರಿಕೆ. ಅವರ ಕನಸನ್ನು ನನಸು ಮಾಡಿ, ದೇಶದ ಉಜ್ವಲ ಭವಿಷ್ಯವನ್ನು ರೂಪಿಸಬೇಕು ಎಂದರು.</p>.<p>ಗ್ರಾಮಾಭಿವೃದ್ಧಿ ಯೋಜನೆ ಫಲಾನು<br />ಭವಿಗಳು ₹84 ಸಾವಿರ ಕೋಟಿ ವ್ಯವಹಾರ ನಡೆಸಿ, ₹3 ಸಾವಿರ ಕೋಟಿ ಉಳಿತಾಯ ಮಾಡಿದ್ದಾರೆ ಎಂದು ಅವರು ಹೇಳಿದರು.</p>.<p>ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಮೂಡು<br />ಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಮಾತನಾಡಿದರು.</p>.<p>ಶ್ರದ್ಧಾ ಅಮಿತ್, ಡಾ. ಮೈತ್ರಿ, ಸಂಪತ್ ಸಾಮ್ರಾಜ್ಯ, ಅನಿಲ್ ಕುಮಾರ್, ಆರ್.ಬಿ. ಹೆಬ್ಬಳ್ಳಿ, ವಿವೇಕ್ ಪಾಯಸ್, ವಸಂತ ಸಾಲ್ಯಾನ್ ಇದ್ದರು.</p>.<p>ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಸ್ವಾಗತಿಸಿದರು. ಯೋಜನಾಧಿಕಾರಿ ಸುರೇಂದ್ರ ಕುಮಾರ್ ಧನ್ಯವಾದವಿತ್ತರು. ಯಶವಂತ್ ಮತ್ತು ತಿಮ್ಮಯ್ಯ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>