‘ಸೋಮವಾರ ಬೆಳಗ್ಗೆ ಸುಮಾರು 8.30 ಗಂಟೆಗೆ ದುರ್ಗೇಶ್ ತನ್ನ ಅಣ್ಣ ಮಧು ಅವರಿಗೆ ಕರೆ ಮಾಡಿ ಸರಿತಾ ಸತ್ತಿರುವ ವಿಷಯ ತಿಳಿಸಿದ್ದ. ಮಧು ಅವರು ಸ್ಥಳಕ್ಕೆ ಬಂದು ನೋಡಿದಾಗ ಸರಿತಾ ಮುಖಕ್ಕೆ ಬಲವಾದ ಏಟು ಬಿದ್ದಿದು ಕಂಡು ಬಂದಿತ್ತು.ಸರಿತಾ ಅವರು ಮೃತಪಟ್ಟ ವಿಷಯ ತಿಳಿದು, ಸ್ಥಳೀಯ ನಿವಾಸಿಯೊಬ್ಬರು ಅವರ ಸೋದರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಈ ಬಗ್ಗೆ ಸರಿತಾ ಅವರ ತಂಗಿ ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.