ಮಂಗಳೂರು (ಉಳ್ಳಾಲ) ಕ್ಷೇತ್ರದಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂಬ ವದಂತಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು ಕೋಲಾರದಲ್ಲಿ ಸ್ಫರ್ಧಿಸುವಂತೆ ಅಲ್ಲಿನ ಬೆಂಬಲಿಗರು ಆಗ್ರಹಿಸಿದ್ದಾರೆ. ಕಳೆದ ಬಾರಿ ಗೆದ್ದಿರುವ ಬಾದಾಮಿ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧಿಸುವುದಕ್ಕೂ ಒತ್ತಾಯ ಇದೆ. ಪುತ್ರನನ್ನು ವರುಣಾ ಕ್ಷೇತ್ರದಿಂದ ಕಣಕ್ಕಿಳಿಸಬೇಕೆಂದು ಬಯಸುವವರೂ ಇದ್ದಾರೆ. ಎಲ್ಲದಕ್ಕೂ ಹೈಕಮಾಂಡ್ ತೀರ್ಮಾನವೇ ಅಂತಿಮ' ಎಂದು ಅವರು ಹೇಳಿದರು.