ಪ್ರತೀಕೂಲ ಹವಾಮಾನದಿಂದಾಗಿ ಅರಬ್ಬೀಸಮುದ್ರದಲ್ಲಿ ಜಿಲ್ಲೆಯ ಕರಾವಳಿ ತೀರದಿಂದ 5.2 ಮೈಲಿ ದೂರದಲ್ಲಿ ವಿದೇಶಿ ಹಡಗು ಲಂಗರು ಹಾಕಿತ್ತು. ಭಾರತೀಯ ಕರಾವಳಿ ರಕ್ಷಣಾ ಪಡೆಯ ಸಿಬ್ಬಂದಿ ಪ್ರತೀಕೂಲ ಹವಾಮಾನವನ್ನು ಲೆಕ್ಕಿಸದೇ ವಿಕ್ರಮ್ ಹಾಗೂ ಅಮರ್ಥ್ಯ ಹಡಗುಗಳಲ್ಲಿ ಸ್ಥಳಕ್ಕೆ ಧಾವಿಸಿ, ಸಮುದ್ರದಲ್ಲಿ ಸಿಲುಕಿದ್ದ ಸಿರಿಯಾ ಪ್ರಜೆಗಳನ್ನು ದಡಕ್ಕೆ ಕರೆತಂದರು.