ಇಲ್ಲಿನ ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗ ಬೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ವಿದ್ಯಾಗಣಪತಿ ವಿಗ್ರಹದ ಪ್ರಾಣಪ್ರತಿಷ್ಠೆ ನೆರವೇರಿಸುವರು. ಇದೇ 21ರಂದು ಬೆಳಿಗ್ಗೆ 8.30ಕ್ಕೆ ಬಂಟ್ವಾಳ ವೆಂಕಟರಮಣ ಸ್ವಾಮಿ ದೇವಸ್ಥಾನ ಬಳಿ ನೇತ್ರಾವತಿ ನದಿಯಲ್ಲಿ ಗಂಗಾಪೂಜೆ ನೆರವೇರಿಸಿ, ತೀರ್ಥ ಕಲಶ ತರಲಾಗುವುದು. ಬಳಿಕ ಧ್ವಜಾರೋಹಣ, ಸರಸ್ವತಿ ಪೂಜೆ, ಉಗ್ರಾಣ ಮುಹೂರ್ತ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದರು.