42 ವರ್ಷಗಳಿಂದ ರಂಗಭೂಮಿಗೆ ಸಂಬಂಧಿಸಿದಂತೆ ನಟನೆ, ನಿರ್ದೇಶನ, ನಾಟಕ ರಚನೆ, ನೇಪಥ್ಯ, ಪ್ರಕಟಣೆ, ತರಬೇತಿ, ಸಂಘಟನೆ ಮತ್ತಿತರ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸಿ, ಮಕ್ಕಳ ರಂಗಭೂಮಿಯಲ್ಲೂ ಐ.ಕೆ. ಬೊಳುವಾರು ಗಮನಾರ್ಹ ಕೆಲಸ ಮಾಡಿದ್ದಾರೆ. ಗ್ರಹಣ, ಡೋಲು, ಮುದುಕ ಸೆಟ್ಟಿಯೂ, ಮೂವರು ಮಕ್ಕಳೂ, ಮಾಯಾ ಕುದುರೆ ಮುಂತಾದ ನಾಟಕಗಳನ್ನು ಬರೆದಿದ್ದಾರೆ. ಚದುರಂಗ, ನಿರತ ನಿರಂತ ಮುಂತಾದ ರಂಗ ಸಂಸ್ಥೆಗಳನ್ನು ಸ್ಥಾಪಿಸಿದ್ದಾರೆ. ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದಾರೆ.