<p><strong>ಮಂಗಳೂರು:</strong> ತೆಂಕ ಎಡಪದವು ಗ್ರಾಮದ ಗುಡ್ಡ ಒಡೆಯಲು ಅನುಮತಿ ಇಲ್ಲದೇ ಸ್ಫೋಟಕಗಳನ್ನು ಕಲ್ಲುಗಳ ನಡುವೆ ಅಳವಡಿಸಿದ್ದ ಹಾಗೂ ಸ್ಫೋಟಕಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಜಾರ್ಖಂಡ್ನ ಸಾಹೀಬ್ ಗಂಜ್ ಜಿಲ್ಲೆಯ ಕಲ್ಯಾಣ್ಚಕ್ನ ಚೋಟಾ ಕಾರ್ತಿಕ್ ದಂಗಾದ ಬಿಬಯ್ ಅರ್ನವ್ ( 36 ವರ್ಷ) ಸ್ಫೋಟಕಗಳನ್ನು ಅಳವಡಿಸಿದ್ದ ಆರೋಪಿ. ಎರಡು ಚೀಲಗಳಲ್ಲಿ ತುಂಬಿಸಿಟ್ಟಿದ್ದ 245 ಜಿಲೆಟಿನ್ ಕಡ್ಡಿಗಳು ಹಾಗೂ 112 ಎಲೆಕ್ಟ್ರಾನಿಕ್ ಡಿಟೋನೇಟರ್ಗಳನ್ನು ಆತನಿಂದ ವಶಪಡಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಸ್ಫೋಟಕ ಬಳಕೆಗೆ ಸಂಬಂಧಿಸಿದ ಯಾವುದೇ ದಾಖಲಾತಿಗಳು ಆತನ ಬಳಿ ಇರಲಿಲ್ಲ. ಅನುಮತಿ ಇಲ್ಲದೆಯೇ ಆತ ಸ್ಫೋಟಕಗಳನ್ನು ಮನುಷ್ಯನ ಜೀವಕ್ಕೆ ಅಪಾಯಕಾರಿಯಾಗುವ ರೀತಿಯಲ್ಲಿ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ. ಈ ಬಗ್ಗೆ ಸ್ಥಳೀಯರು ನೀಡಿದ್ದ ಮಾಹಿತಿ ಆಧರಿಸಿ ಬಜಪೆ ಠಾಣೆಯ ಪೊಲೀಸರು ಮಂಗಳವಾರ ಸ್ಥಳಕ್ಕೆ ಧಾವಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ತೆಂಕ ಎಡಪದವು ಗ್ರಾಮದ ಗುಡ್ಡ ಒಡೆಯಲು ಅನುಮತಿ ಇಲ್ಲದೇ ಸ್ಫೋಟಕಗಳನ್ನು ಕಲ್ಲುಗಳ ನಡುವೆ ಅಳವಡಿಸಿದ್ದ ಹಾಗೂ ಸ್ಫೋಟಕಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಜಾರ್ಖಂಡ್ನ ಸಾಹೀಬ್ ಗಂಜ್ ಜಿಲ್ಲೆಯ ಕಲ್ಯಾಣ್ಚಕ್ನ ಚೋಟಾ ಕಾರ್ತಿಕ್ ದಂಗಾದ ಬಿಬಯ್ ಅರ್ನವ್ ( 36 ವರ್ಷ) ಸ್ಫೋಟಕಗಳನ್ನು ಅಳವಡಿಸಿದ್ದ ಆರೋಪಿ. ಎರಡು ಚೀಲಗಳಲ್ಲಿ ತುಂಬಿಸಿಟ್ಟಿದ್ದ 245 ಜಿಲೆಟಿನ್ ಕಡ್ಡಿಗಳು ಹಾಗೂ 112 ಎಲೆಕ್ಟ್ರಾನಿಕ್ ಡಿಟೋನೇಟರ್ಗಳನ್ನು ಆತನಿಂದ ವಶಪಡಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಸ್ಫೋಟಕ ಬಳಕೆಗೆ ಸಂಬಂಧಿಸಿದ ಯಾವುದೇ ದಾಖಲಾತಿಗಳು ಆತನ ಬಳಿ ಇರಲಿಲ್ಲ. ಅನುಮತಿ ಇಲ್ಲದೆಯೇ ಆತ ಸ್ಫೋಟಕಗಳನ್ನು ಮನುಷ್ಯನ ಜೀವಕ್ಕೆ ಅಪಾಯಕಾರಿಯಾಗುವ ರೀತಿಯಲ್ಲಿ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ. ಈ ಬಗ್ಗೆ ಸ್ಥಳೀಯರು ನೀಡಿದ್ದ ಮಾಹಿತಿ ಆಧರಿಸಿ ಬಜಪೆ ಠಾಣೆಯ ಪೊಲೀಸರು ಮಂಗಳವಾರ ಸ್ಥಳಕ್ಕೆ ಧಾವಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>