ಹೊಸ ಮರಳು ನೀತಿ ಅನ್ವಯ ಸಿಆರ್ಜೆಡ್ಯೇತರ ಪ್ರದೇಶಗಳಲ್ಲಿ ಜಂಟಿ ಸ್ಥಳ ಪರಿಶೀಲನೆ ನಡೆಸಿ, ಸಲ್ಲಿಸಿರುವ ವರದಿಯ ಅನುಸಾರ ಮೊದಲನೇ, ಎರಡನೇ ಮತ್ತು ಮೂರನೇ ಶ್ರೇಣಿಯ ಹಳ್ಳ, ತೊರೆಗಳಲ್ಲಿ ಗುರುತಿಸಿರುವ ಮರಳು ನಿಕ್ಷೇಪಗಳಿಂದ ಮರಳನ್ನು ತೆಗೆದು ವಿಲೇವಾರಿ ಮಾಡಲು ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಿಗೆ ವಹಿಸಲಾಗಿದೆ ಎಂದು ಜಿಲ್ಲಾ ಮರಳು ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.