ಮಂಗಳೂರು:ನಗರದ ಕಣ್ಣೂರು ಮಸೀದಿಯ ಹಿಂಭಾಗದಲ್ಲಿ ನೇತ್ರಾವತಿ ನದಿ ತೀರದಲ್ಲಿ ಮರಳಿನ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಕಂಕನಾಡಿ ಠಾಣೆಯ ಪೊಲೀಸರು ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಮರಳು ಸಾಗಿಸಲು ಬಳಸಿದ ಟಿಪ್ಪರ್, ಮರಳನ್ನು ಟಿಪ್ಪರ್ಗೆ ತುಂಬಿಸಲು ಬಳಸಿದ್ದ ಜೆಸಿಬಿ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಟಿಪ್ಪರ್ ಚಾಲಕನ್ನು ಬಂಧಿಸಿದ್ದಾರೆ. ಜೆಸಿಬಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.