<p><strong>ಮಂಗಳೂರು:</strong> ರಾಷ್ಟ್ರೀಯ ತನಿಖಾದಳ(ಎನ್ಐಎ)ದ ಕಚೇರಿಯನ್ನು ಮಂಗಳೂರಿನಲ್ಲಿ ಆರಂಭಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುಳಿವು ನೀಡಿದರು.</p>.<p>ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಎರಡು ದಿನಗಳ ಭೇಟಿ ಪೂರ್ಣಗೊಳಿಸಿ, ಶುಕ್ರವಾರ ಬೆಂಗಳೂರಿಗೆ ತೆರಳುವ ಮುನ್ನ ಇಲ್ಲಿನ ಸರ್ಕ್ಯೂಟ್ ಹೌಸ್ನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p>.<p>‘ಗೃಹ ಸಚಿವರು ಸದ್ಯದಲ್ಲಿ ಮಂಗಳೂರಿಗೆ ಭೇಟಿ ನೀಡಿ, ಎನ್ಐಎ ಕಚೇರಿ ಸ್ಥಾಪನೆ ಸಂಬಂಧ ಪರಿಶೀಲಿಸುವರು. ಈಗಾಗಲೇ ಎರಡು ಸಭೆಗಳನ್ನು ನಡೆಸಿ, ವರದಿ ಪಡೆದಿದ್ದಾರೆ. ಅವರ ಮಂಗಳೂರು ಭೇಟಿ ಬಳಿಕ, ಸಭೆ ನಡೆಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಸರ್ಕಾರ ಈಗಾಗಲೇ ಕೆಲವು ಹೆಜ್ಜೆಗಳನ್ನು ಇಟ್ಟಿದ್ದು, ಎಲ್ಲವನ್ನೂ ಬಹಿರಂಗಗೊಳಿಸಲು ಸಾಧ್ಯವಿಲ್ಲ. ಬರುವ ದಿನಗಳಲ್ಲಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ’ ಎಂದರು.</p>.<p>ಗಡಿ ಭದ್ರತೆ ಪರಿಶೀಲಿಸಲು ತಲಪಾಡಿಗೆ ಭೇಟಿ ನೀಡಬೇಕಾಗಿದ್ದ ಮುಖ್ಯಮಂತ್ರಿ ಕಾರ್ಯಕ್ರಮವನ್ನು ರದ್ದುಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ರಾಷ್ಟ್ರೀಯ ತನಿಖಾದಳ(ಎನ್ಐಎ)ದ ಕಚೇರಿಯನ್ನು ಮಂಗಳೂರಿನಲ್ಲಿ ಆರಂಭಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುಳಿವು ನೀಡಿದರು.</p>.<p>ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಎರಡು ದಿನಗಳ ಭೇಟಿ ಪೂರ್ಣಗೊಳಿಸಿ, ಶುಕ್ರವಾರ ಬೆಂಗಳೂರಿಗೆ ತೆರಳುವ ಮುನ್ನ ಇಲ್ಲಿನ ಸರ್ಕ್ಯೂಟ್ ಹೌಸ್ನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p>.<p>‘ಗೃಹ ಸಚಿವರು ಸದ್ಯದಲ್ಲಿ ಮಂಗಳೂರಿಗೆ ಭೇಟಿ ನೀಡಿ, ಎನ್ಐಎ ಕಚೇರಿ ಸ್ಥಾಪನೆ ಸಂಬಂಧ ಪರಿಶೀಲಿಸುವರು. ಈಗಾಗಲೇ ಎರಡು ಸಭೆಗಳನ್ನು ನಡೆಸಿ, ವರದಿ ಪಡೆದಿದ್ದಾರೆ. ಅವರ ಮಂಗಳೂರು ಭೇಟಿ ಬಳಿಕ, ಸಭೆ ನಡೆಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಸರ್ಕಾರ ಈಗಾಗಲೇ ಕೆಲವು ಹೆಜ್ಜೆಗಳನ್ನು ಇಟ್ಟಿದ್ದು, ಎಲ್ಲವನ್ನೂ ಬಹಿರಂಗಗೊಳಿಸಲು ಸಾಧ್ಯವಿಲ್ಲ. ಬರುವ ದಿನಗಳಲ್ಲಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ’ ಎಂದರು.</p>.<p>ಗಡಿ ಭದ್ರತೆ ಪರಿಶೀಲಿಸಲು ತಲಪಾಡಿಗೆ ಭೇಟಿ ನೀಡಬೇಕಾಗಿದ್ದ ಮುಖ್ಯಮಂತ್ರಿ ಕಾರ್ಯಕ್ರಮವನ್ನು ರದ್ದುಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>