ವಿಟ್ಲ: ಇಲ್ಲಿನ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಆಡಳಿತ ಮಂಡಳಿಯ ನಿರ್ದೇಶಕ ಹಸನ್ ವಿಟ್ಲ ಅವರು ಧ್ವಜಾರೋಹಣ ನೆರವೇರಿಸಿದರು.
ಸಭಾ ಕಾರ್ಯಕ್ರಮದಲ್ಲಿ ನಿವೃತ್ತ ಯೋಧ ಕೊಲ್ಯ ಹರೀಶ್ ಡಿ.ಶೆಟ್ಟಿ, ಶಾಲಾ ನಾಯಕಿ ಸೃಜನಾ ರೈ, ವಿದ್ಯಾರ್ಥಿನಿ ಅಕ್ಷತಾ ಪೈ, ಲಿಖಿತ ಅವರು ಮಾತನಾಡಿದರು.
ದಕ್ಷಿಣ ಕೊರಿಯಾದಲ್ಲಿ ನಡೆದ ವಿಶ್ವ ಜಂಬೂರಿಯಲ್ಲಿ ಭಾಗವಹಿಸಿದ ಅನುಭವಗಳನ್ನು ವಿದ್ಯಾರ್ಥಿಗಳಾದ ಸೃಜನಾ ರೈ ಹಾಗೂ ಅನೀಶ್ ಕೃಷ್ಣ ಆಚಾರ್ ವಿವರಿಸಿದರು. ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಆಡಳಿತ ಮಂಡಳಿಯ ಉಪಾಧ್ಯಕ್ಷ ಶ್ರೀಧರ್ ಶೆಟ್ಟಿ, ಕೋಶಾಧಿಕಾರಿ ಪ್ರಭಾಕರ್ ಶೆಟ್ಟಿ, ಪ್ರತಿಭಾ ಶ್ರೀಧರ್ ಶೆಟ್ಟಿ, ಆಡಳಿತ ಅಧಿಕಾರಿ ರಾಧಾಕೃಷ್ಣ ಎ., ಪ್ರಾಂಶುಪಾಲರಾದ ಜಯರಾಮ ರೈ, ಉಪಪ್ರಾಂಶುಪಾಲೆ ಜ್ಯೋತಿ ಶೆಣೈ ಇದ್ದರು.
ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.