<p><strong>ಮಂಗಳೂರು:</strong> ಕುವೈತ್ನ ಇಂಡಿಯನ್ ಕಮ್ಯುನಿಟಿ ಸಪೋರ್ಟ್ ಗ್ರೂಪ್ (ಐಸಿಎಸ್ ಜಿ)ನಿಂದ ಭಾರತಕ್ಕೆ 147 ಟನ್ ದ್ರವೀಕೃತ ಆಮ್ಲಜನಕ, ಇತರ ವೈದ್ಯಕೀಯ ಸಾಮಗ್ರಿಗಳನ್ನು ನೀಡಲಾಗಿದೆ. ಈ ಸಾಮಗ್ರಿಗಳನ್ನು ಹೊತ್ತ ನೌಕಾಪಡೆಯ ಹಡಗು ಐಎನ್ಎಸ್ ಶಾರ್ದೂಲ್ ಮಂಗಳವಾರ ಬೆಳಿಗ್ಗೆ ಇಲ್ಲಿನ ಎನ್ಎಂಪಿಟಿಗೆ ಬಂದಿದೆ.<br /><br />ಭಾರತೀಯ ರೆಡ್ ಕ್ರಾಸ್ ಸೊಸೈಟಿಗೆ ನೀಡಲಾದ ಈ ನೆರವನ್ನು ರೆಡ್ ಕ್ರಾಸ್ನ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸ್ವೀಕರಿಸಿದೆ. ದ್ರವೀಕೃತ ಆಮ್ಲಜನಕ ಹೊಂದಿದ 11 ಟ್ಯಾಂಕ್ಗಳು, 2 ಸೆಮಿ ಟ್ರೇಲರ್ಗಳು, 1,200 ಆಕ್ಸಿಜನ್ ಸಿಲಿಂಡರ್ಗಳಿವೆ.</p>.<p>ರೆಡ್ ಕ್ರಾಸ್ ಜಿಲ್ಲಾ ಸಮಿತಿ ಅಧ್ಯಕ್ಷ ಶಾಂತರಾಮ್ ಶೆಟ್ಟಿ, ಗೌರವ ಕಾರ್ಯದರ್ಶಿ ಪ್ರಭಾಕರ ಶರ್ಮಾ, ರಾಜ್ಯ ನಿರ್ವಹಣಾ ಸಮಿತಿಯ ಸದಸ್ಯ ಯತೀಶ್ ಬೈಕಂಪಾಡಿ ಎನ್ಎಂಪಿಟಿಯಲ್ಲಿ ಈ ಸರಕು ಸ್ವೀಕರಿಸಿದರು.</p>.<p>ಎಡಿಜಿಪಿ ಪ್ರತಾಪ್ ರೆಡ್ಡಿ, ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಎಸಿಪಿ ಮಹೇಶ್ ಕುಮಾರ್, ಕರಾವಳಿ ಕಾವಲು ಪಡೆ ಕಮಾಂಡರ್ ವೆಂಕಟೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಕುವೈತ್ನ ಇಂಡಿಯನ್ ಕಮ್ಯುನಿಟಿ ಸಪೋರ್ಟ್ ಗ್ರೂಪ್ (ಐಸಿಎಸ್ ಜಿ)ನಿಂದ ಭಾರತಕ್ಕೆ 147 ಟನ್ ದ್ರವೀಕೃತ ಆಮ್ಲಜನಕ, ಇತರ ವೈದ್ಯಕೀಯ ಸಾಮಗ್ರಿಗಳನ್ನು ನೀಡಲಾಗಿದೆ. ಈ ಸಾಮಗ್ರಿಗಳನ್ನು ಹೊತ್ತ ನೌಕಾಪಡೆಯ ಹಡಗು ಐಎನ್ಎಸ್ ಶಾರ್ದೂಲ್ ಮಂಗಳವಾರ ಬೆಳಿಗ್ಗೆ ಇಲ್ಲಿನ ಎನ್ಎಂಪಿಟಿಗೆ ಬಂದಿದೆ.<br /><br />ಭಾರತೀಯ ರೆಡ್ ಕ್ರಾಸ್ ಸೊಸೈಟಿಗೆ ನೀಡಲಾದ ಈ ನೆರವನ್ನು ರೆಡ್ ಕ್ರಾಸ್ನ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸ್ವೀಕರಿಸಿದೆ. ದ್ರವೀಕೃತ ಆಮ್ಲಜನಕ ಹೊಂದಿದ 11 ಟ್ಯಾಂಕ್ಗಳು, 2 ಸೆಮಿ ಟ್ರೇಲರ್ಗಳು, 1,200 ಆಕ್ಸಿಜನ್ ಸಿಲಿಂಡರ್ಗಳಿವೆ.</p>.<p>ರೆಡ್ ಕ್ರಾಸ್ ಜಿಲ್ಲಾ ಸಮಿತಿ ಅಧ್ಯಕ್ಷ ಶಾಂತರಾಮ್ ಶೆಟ್ಟಿ, ಗೌರವ ಕಾರ್ಯದರ್ಶಿ ಪ್ರಭಾಕರ ಶರ್ಮಾ, ರಾಜ್ಯ ನಿರ್ವಹಣಾ ಸಮಿತಿಯ ಸದಸ್ಯ ಯತೀಶ್ ಬೈಕಂಪಾಡಿ ಎನ್ಎಂಪಿಟಿಯಲ್ಲಿ ಈ ಸರಕು ಸ್ವೀಕರಿಸಿದರು.</p>.<p>ಎಡಿಜಿಪಿ ಪ್ರತಾಪ್ ರೆಡ್ಡಿ, ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಎಸಿಪಿ ಮಹೇಶ್ ಕುಮಾರ್, ಕರಾವಳಿ ಕಾವಲು ಪಡೆ ಕಮಾಂಡರ್ ವೆಂಕಟೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>