ನರೇಂದ್ರ ಮೋದಿ ಅವರು ಪ್ರಧಾನಿ ಆದ ನಂತರ ಮಂಗಳೂರಿಗೆ ₹20 ಸಾವಿರ ಕೋಟಿ ಮೊತ್ತದ ಯೋಜನೆಗಳನ್ನು ನೀಡಿದ್ದಾರೆ. ₹1 ಸಾವಿರ ಕೋಟಿ ಮೊತ್ತದ ಮಂಗಳೂರು ಬೆಂಗಳೂರು ರಸ್ತೆ ವಿಸ್ತಾರ ಯೋಜನೆಯನ್ನು ಪುನರ್ ಪರಿಶೀಲಿಸಿದ್ದು, ಫೆಬ್ರುವರಿಯಲ್ಲಿ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ. ₹10 ಸಾವಿರ ಕೋಟಿ ವೆಚ್ಚದ ಶಿರಾಡಿ ಸುರಂಗ ಮಾರ್ಗಕ್ಕೆ ಅನುಮೋದನೆ ನೀಡಲಾಗಿದೆ. ಪ್ಲಾಸ್ಟಿಕ್ ಪಾರ್ಕ್ಗೂ ಒಪ್ಪಿಗೆ ನೀಡಲಾಗಿದ್ದು, ಕಾರ್ಕಳ–ಕುಲಶೇಖರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಶೀಘ್ರ ಟೆಂಡರ್ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.