ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಾವಳಿ ಕಾವಲು ಪಡೆ ತರಬೇತಿ ಕೇಂದ್ರಕ್ಕೆ ಶೀಘ್ರ ಶಿಲಾನ್ಯಾಸ

Last Updated 6 ಜನವರಿ 2021, 5:48 IST
ಅಕ್ಷರ ಗಾತ್ರ

ಮಂಗಳೂರು: ನಗರದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಕರಾವಳಿ ಕಾವಲು ಪಡೆ ತರಬೇತಿ ಕೇಂದ್ರದ ಶಿಲಾನ್ಯಾಸ ಇನ್ನೆರಡು ತಿಂಗಳಲ್ಲಿ ನೆರವೇರಲಿದೆ ಎಂದು ಸಂಸದ ನಳಿನ್‌ಕುಮಾರ್ ಕಟೀಲ್‌ ಹೇಳಿದರು.

ನರೇಂದ್ರ ಮೋದಿ ಅವರು ಪ್ರಧಾನಿ ಆದ ನಂತರ ಮಂಗಳೂರಿಗೆ ₹20 ಸಾವಿರ ಕೋಟಿ ಮೊತ್ತದ ಯೋಜನೆಗಳನ್ನು ನೀಡಿದ್ದಾರೆ. ₹1 ಸಾವಿರ ಕೋಟಿ ಮೊತ್ತದ ಮಂಗಳೂರು ಬೆಂಗಳೂರು ರಸ್ತೆ ವಿಸ್ತಾರ ಯೋಜನೆಯನ್ನು ಪುನರ್‌ ಪರಿಶೀಲಿಸಿದ್ದು, ಫೆಬ್ರುವರಿಯಲ್ಲಿ ಟೆಂಡರ್‌ ಪ್ರಕ್ರಿಯೆ ಆರಂಭವಾಗಲಿದೆ. ₹10 ಸಾವಿರ ಕೋಟಿ ವೆಚ್ಚದ ಶಿರಾಡಿ ಸುರಂಗ ಮಾರ್ಗಕ್ಕೆ ಅನುಮೋದನೆ ನೀಡಲಾಗಿದೆ. ಪ್ಲಾಸ್ಟಿಕ್‌ ಪಾರ್ಕ್‌ಗೂ ಒಪ್ಪಿಗೆ ನೀಡಲಾಗಿದ್ದು, ಕಾರ್ಕಳ–ಕುಲಶೇಖರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಶೀಘ್ರ ಟೆಂಡರ್ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.

ಗೇಲ್‌ ಪೈಪ್‌ಲೈನ್‌ ಯೋಜನೆಯಲ್ಲಿ ಕೇಂದ್ರ ಸಚಿವ ದಿ. ಅನಂತಕುಮಾರ್‌, ಈಗಿನ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರ ಪಾತ್ರ ಮಹತ್ತರವಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT