ಮಂಗಳೂರು: ಇನ್ಫೋಸಿಸ್ ಪ್ರತಿ಼ಷ್ಠಾನದ ಅಧ್ಯಕ್ಷೆ ಡಾ. ಸುಧಾಮೂರ್ತಿ ಅವರು ಪೊಲೀಸ್ ಇಲಾಖೆಯ ಕೋರಿಕೆಗೆ ತಕ್ಷಣ ಸ್ಪಂದಿಸಿ, 36 ಗಂಟೆಯೊಳಗೆ ₹ ಲಕ್ಷ ಮೌಲ್ಯದ ತುರ್ತು ವೈದ್ಯಕೀಯ ಸಾಮಗ್ರಿಗಳನ್ನು ಕಳುಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಗರ ಪೊಲೀಸ್ ಆಯುಕ್ತ ಡಾ. ಹರ್ಷ ಅವರು, ಡಾ.ಸುಧಾ ಮೂರ್ತಿ ಹಾಗೂ ಇನ್ಫೋಸಿಸ್ ಫೌಂಡೇಶನ್ನ ರಾಮದಾಸ್ ಕಾಮತ್ ಮತ್ತು ಅವರ ತಂಡಕ್ಕೆ ವಿಶೇಷ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
Mrs Sudha Murthy responded to the call of Mangalore Police on behalf of D K district administration and within 36hrs Critical Medical supplies worth Rs 28 lakhs have reached Mangalore We thank Madam Sudha Murty and Infosys Foundation' Sri Ramdas Kamat and team ..#COVID19pic.twitter.com/FqhFiI2x8t
— Harsha IPS CP Mangaluru City (@compolmlr) March 28, 2020
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತುರ್ತು ವೈದ್ಯಕೀಯ ಸಾಮಗ್ರಿಗಳ ನೆರವಿಗಾಗಿ ದ.ಕ ಜಿಲ್ಲಾಡಳಿತದ ಪರವಾಗಿ ಮಂಗಳೂರು ಪೊಲೀಸ್ ಇಲಾಖೆ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ. ಸುಧಾಮೂರ್ತಿ ಅವರ ಬಳಿ ನೆರವು ನೀಡುವಂತೆ ವಿನಂತಿಸಿಕೊಂಡಿತ್ತು.