<p><strong>ಬಂಟ್ವಾಳ:</strong> ಕೆಲವು ವರ್ಷಗಳಿಂದ ಮಳೆಗಾಲದಲ್ಲಿ ತುಂಬೆ ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ರಸ್ತೆ ಬದಿ ಮೋರಿ ಅಳವಡಿಸುವ ಕಾಮಗಾರಿ ಮಂಗಳವಾರ ಬಹುತೇಕ ಪೂರ್ಣಗೊಂಡಿದೆ.</p>.<p>ಸರಾಗವಾಗಿ ನೀರು ಹರಿದು ಹೋಗಲು ವ್ಯವಸ್ಥೆ ಇಲ್ಲದೆ ಹೆದ್ದಾರಿಯಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಆಗುತ್ತಿತ್ತು. ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರ ಸೂಚನೆಯಂತೆ ಹೆದ್ದಾರಿ ಇಲಾಖೆ ಅಧಿಕಾರಿಗಳು ಮೋರಿ ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿದ್ದರು.</p>.<p>ಪ್ರತಿ ವರ್ಷ ಮಳೆಗಾಲದಲ್ಲಿ ಈ ಹೆದ್ದಾರಿಯಲ್ಲಿ ಮಳೆ ನೀರು ಸಂಗ್ರಹಗೊಂಡು ಮಂಗಳೂರಿನಿಂದ ಬಿ.ಸಿ.ರೋಡು ಕಡೆಗೆ ಬರುವ ವಾಹನಗಳ ವಾಹನ ಸಂಚಾರಕ್ಕೆ ಸಮಸ್ಯೆ ಆಗುತ್ತಿದ್ದ ಬಗ್ಗೆ ದೂರು ಬಂದಿತ್ತು. ಕೆಲ ದಿನ ಚರಂಡಿ ದುರಸ್ತಿ ಕಾಮಗಾರಿ ನಡೆದು ಬಳಿಕ ಯಥಾ ಸ್ಥಿತಿ ಮುಂದುವರಿಯುತ್ತಿತ್ತು. ಈ ಹೆದ್ದಾರಿ ಪಕ್ಕದ ಗುಡ್ಡದ ನೀರು ನೇರವಾಗಿ ರಸ್ತೆಗೆ ಹರಿದು ಬರುತಿದ್ದು, ಇಲ್ಲಿನ ಬಂಡೆಗಳನ್ನು ಒಡೆದು ರಸ್ತೆ ನಿರ್ಮಿಸಿದ್ದರಿಂದ ಸೂಕ್ತ ಚರಂಡಿ ನಿರ್ಮಿಸಲು ಸಾಧ್ಯವಾಗಿರಲಿಲ್ಲ.</p>.<p>ಕಾಮಗಾರಿ ಪೂರ್ಣಗೊಂಡ ಬಳಿಕ ವಾಹನ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಸ್ಥಳದಲ್ಲಿದ್ದ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಟ್ವಾಳ:</strong> ಕೆಲವು ವರ್ಷಗಳಿಂದ ಮಳೆಗಾಲದಲ್ಲಿ ತುಂಬೆ ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ರಸ್ತೆ ಬದಿ ಮೋರಿ ಅಳವಡಿಸುವ ಕಾಮಗಾರಿ ಮಂಗಳವಾರ ಬಹುತೇಕ ಪೂರ್ಣಗೊಂಡಿದೆ.</p>.<p>ಸರಾಗವಾಗಿ ನೀರು ಹರಿದು ಹೋಗಲು ವ್ಯವಸ್ಥೆ ಇಲ್ಲದೆ ಹೆದ್ದಾರಿಯಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಆಗುತ್ತಿತ್ತು. ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರ ಸೂಚನೆಯಂತೆ ಹೆದ್ದಾರಿ ಇಲಾಖೆ ಅಧಿಕಾರಿಗಳು ಮೋರಿ ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿದ್ದರು.</p>.<p>ಪ್ರತಿ ವರ್ಷ ಮಳೆಗಾಲದಲ್ಲಿ ಈ ಹೆದ್ದಾರಿಯಲ್ಲಿ ಮಳೆ ನೀರು ಸಂಗ್ರಹಗೊಂಡು ಮಂಗಳೂರಿನಿಂದ ಬಿ.ಸಿ.ರೋಡು ಕಡೆಗೆ ಬರುವ ವಾಹನಗಳ ವಾಹನ ಸಂಚಾರಕ್ಕೆ ಸಮಸ್ಯೆ ಆಗುತ್ತಿದ್ದ ಬಗ್ಗೆ ದೂರು ಬಂದಿತ್ತು. ಕೆಲ ದಿನ ಚರಂಡಿ ದುರಸ್ತಿ ಕಾಮಗಾರಿ ನಡೆದು ಬಳಿಕ ಯಥಾ ಸ್ಥಿತಿ ಮುಂದುವರಿಯುತ್ತಿತ್ತು. ಈ ಹೆದ್ದಾರಿ ಪಕ್ಕದ ಗುಡ್ಡದ ನೀರು ನೇರವಾಗಿ ರಸ್ತೆಗೆ ಹರಿದು ಬರುತಿದ್ದು, ಇಲ್ಲಿನ ಬಂಡೆಗಳನ್ನು ಒಡೆದು ರಸ್ತೆ ನಿರ್ಮಿಸಿದ್ದರಿಂದ ಸೂಕ್ತ ಚರಂಡಿ ನಿರ್ಮಿಸಲು ಸಾಧ್ಯವಾಗಿರಲಿಲ್ಲ.</p>.<p>ಕಾಮಗಾರಿ ಪೂರ್ಣಗೊಂಡ ಬಳಿಕ ವಾಹನ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಸ್ಥಳದಲ್ಲಿದ್ದ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>