ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದ ಬಾಗಿಲಿಗೆ ‘ಬುರ್ಖಾ ತೆಗೆದು ಒಳಬನ್ನಿ’ ಎಂದು ಫಲಕ ಹಾಕಲಾಗಿತ್ತು. ವರ್ಷದ ಹಿಂದೆಯೇ ಅಳವಡಿಸಿದ್ದ ಈ ಫಲಕದ ಚಿತ್ರವು ಎರಡು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ, ಪುತ್ತೂರಿನ ಶಾಸಕ ಅಶೋಕ್ ರೈ ಅವರು ಇರುವ ವಾಟ್ಸ್ಆ್ಯಪ್ ಗ್ರೂಪ್ವೊಂದರಲ್ಲೂ ಕಾಣಿಸಿಕೊಂಡಿತ್ತು. ಇದನ್ನು ಗಮನಿಸಿದ ಶಾಸಕರು, ಫಲಕವನ್ನು ತೆಗೆಯುವಂತೆ ಸಿಬ್ಬಂದಿಗೆ ಸೂಚಿಸಿದ್ದ ಕಾರಣ ಇದನ್ನು ತೆರವುಗೊಳಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.