<p><strong>ಸುಳ್ಯ:</strong> ಇಲ್ಲಿನ ಪಟ್ಟಣ ಪಂಚಾಯಿತಿ ಕಸ ವಿಲೇವಾರಿಗೆ ಸೂಕ್ತ ಜಾಗ ಗುರುತಿಸುವಂತೆ ಮುಖ್ಯಾಧಿಕಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು.</p>.<p>ಪಟ್ಟಣ ಪಂಚಾಯಿತಿ ಮುಂಭಾಗದ ಶೆಡ್ನಲ್ಲಿರುವ ಕಸದ ರಾಶಿಗೆ ಪರಿಹಾರ ನೀಡಬೇಕು. ಶೆಡ್ ವೀಕ್ಷಿಸುವಂತೆ ಸಾರ್ವಜನಿಕರು ಕೇಳಿಕೊಂಡರು. ಸಚಿವ ದಿನೇಶ್ ಗುಂಡೂರಾವ್ ಕಸದ ರಾಶಿಯಿದ್ದ ಶೆಡ್ ಬಳಿ ಬಂದರು. ಈ ವೇಳೆ ಸ್ಥಳಕ್ಕೆ ಬಂದ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಜಾಗದ ಅಭಾವವಿದ್ದು, ಸೂಕ್ತ ಜಾಗ ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಮನವಿ ಮಾಡಿದರು.</p>.<p>‘ ನಮ್ಮಲ್ಲಿ ಜಾಗದ ಕೊರತೆ ಇದೆ. ಅಧ್ಯಯನಕ್ಕಾಗಿ ನಾವು ಕೈಗೊಂಡ ಪ್ರವಾಸಕ್ಕೆ ಕೆಲವರು ಆಕ್ಷೇಪ ಮಾಡಿದ್ದಾರೆ. ಇಲ್ಲ–ಸಲ್ಲದ ಮಾತನಾಡಿದ್ದಾರೆ. ನನಗೆ ಅವಮಾನವಾಗಿದೆ. ಮಾನನಷ್ಟ ಹೂಡುತ್ತೇನೆ. ಮುಂದಿನ ಸಾಮಾನ್ಯ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳುತ್ತೇವೆ’ ಎಂದು ಶಶಿಕಲಾ ಬೇಸರ ವ್ಯಕ್ತಪಡಿಸಿದರು.</p>.<p>‘ನಾವು ಆಕ್ಷೇಪಿಸಿದ್ದು ಪ್ರವಾಸದ ವಿಚಾರಕ್ಕಲ್ಲ. ರಾಜ್ಯದ ಸಭಾಪತಿಗಳ ಬಗ್ಗೆ ಅವರು ಆಡಿದ ಮಾತಿಗೆ ನಾವೂ ಆಕ್ಷೇಪಿಸಿದ್ದೇವೆ’ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಹೇಳಿದರು. </p>.<p>ಆಗ ಸಚಿವರು, ಯಾರೂ ಯಾರಿಗೂ ಅವಮಾನ ಮಾಡಬಾರದು. ಕಸ ವಿಲೇವಾರಿಗೆ ತಹಶೀಲ್ದಾರ್ ಜತೆ ಚರ್ಚಿಸಿ ಸೂಕ್ತ ಜಾಗ ಗುರುತಿಸಿ ಎಂದು ಸ್ಥಳದಲ್ಲಿದ್ದ ಮುಖ್ಯಾಧಿಕಾರಿಗೆ ಸೂಚನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಳ್ಯ:</strong> ಇಲ್ಲಿನ ಪಟ್ಟಣ ಪಂಚಾಯಿತಿ ಕಸ ವಿಲೇವಾರಿಗೆ ಸೂಕ್ತ ಜಾಗ ಗುರುತಿಸುವಂತೆ ಮುಖ್ಯಾಧಿಕಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು.</p>.<p>ಪಟ್ಟಣ ಪಂಚಾಯಿತಿ ಮುಂಭಾಗದ ಶೆಡ್ನಲ್ಲಿರುವ ಕಸದ ರಾಶಿಗೆ ಪರಿಹಾರ ನೀಡಬೇಕು. ಶೆಡ್ ವೀಕ್ಷಿಸುವಂತೆ ಸಾರ್ವಜನಿಕರು ಕೇಳಿಕೊಂಡರು. ಸಚಿವ ದಿನೇಶ್ ಗುಂಡೂರಾವ್ ಕಸದ ರಾಶಿಯಿದ್ದ ಶೆಡ್ ಬಳಿ ಬಂದರು. ಈ ವೇಳೆ ಸ್ಥಳಕ್ಕೆ ಬಂದ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಜಾಗದ ಅಭಾವವಿದ್ದು, ಸೂಕ್ತ ಜಾಗ ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಮನವಿ ಮಾಡಿದರು.</p>.<p>‘ ನಮ್ಮಲ್ಲಿ ಜಾಗದ ಕೊರತೆ ಇದೆ. ಅಧ್ಯಯನಕ್ಕಾಗಿ ನಾವು ಕೈಗೊಂಡ ಪ್ರವಾಸಕ್ಕೆ ಕೆಲವರು ಆಕ್ಷೇಪ ಮಾಡಿದ್ದಾರೆ. ಇಲ್ಲ–ಸಲ್ಲದ ಮಾತನಾಡಿದ್ದಾರೆ. ನನಗೆ ಅವಮಾನವಾಗಿದೆ. ಮಾನನಷ್ಟ ಹೂಡುತ್ತೇನೆ. ಮುಂದಿನ ಸಾಮಾನ್ಯ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳುತ್ತೇವೆ’ ಎಂದು ಶಶಿಕಲಾ ಬೇಸರ ವ್ಯಕ್ತಪಡಿಸಿದರು.</p>.<p>‘ನಾವು ಆಕ್ಷೇಪಿಸಿದ್ದು ಪ್ರವಾಸದ ವಿಚಾರಕ್ಕಲ್ಲ. ರಾಜ್ಯದ ಸಭಾಪತಿಗಳ ಬಗ್ಗೆ ಅವರು ಆಡಿದ ಮಾತಿಗೆ ನಾವೂ ಆಕ್ಷೇಪಿಸಿದ್ದೇವೆ’ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಹೇಳಿದರು. </p>.<p>ಆಗ ಸಚಿವರು, ಯಾರೂ ಯಾರಿಗೂ ಅವಮಾನ ಮಾಡಬಾರದು. ಕಸ ವಿಲೇವಾರಿಗೆ ತಹಶೀಲ್ದಾರ್ ಜತೆ ಚರ್ಚಿಸಿ ಸೂಕ್ತ ಜಾಗ ಗುರುತಿಸಿ ಎಂದು ಸ್ಥಳದಲ್ಲಿದ್ದ ಮುಖ್ಯಾಧಿಕಾರಿಗೆ ಸೂಚನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>