ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ವಾಹನಕ್ಕೆ ಹಾನಿಯಾದ ಸಂದರ್ಭದಲ್ಲಿ ಪರಿಹಾರಕ್ಕೆ ಸಲ್ಲಿಸಿದ ಅರ್ಜಿಯ ಮೌಲ್ಯ ಮಾಪನ ಮಾಡಲಾಗುತ್ತದೆ. ಈ ಅಂದಾಜು ನಷ್ಟದ ಮೊತ್ತ ₹ 50 ಸಾವಿರ ಮೀರಿದರೆ ವಾಹನದ ಅಪಘಾತಕ್ಕೆ ಸಂಬಂಧಿಸಿ ಪರಿವೀಕ್ಷಣೆಯನ್ನು ಕೇಂದ್ರ ಸರ್ಕಾರದ ಪರವಾನಗಿ ಇರುವ ಸರ್ವೆಯರ್ ಮಾಡಬೇಕೆಂಬ ಕಾನೂನು ಇದೆ. ಇದನ್ನು ಎಲ್ಲಾ ವಿಮಾ ಕಂಪನಿಯವರು ಕಡ್ಡಾಯವಾಗಿ ಪಾಲಿಸಬೇಕು’ ಎಂದು ಅವರು ಹೇಳಿದರು.