ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟ ವಿನೋದ್ ಆಳ್ವಗೆ ಮಧ್ಯಂತರ ಜಾಮೀನು

Last Updated 21 ಏಪ್ರಿಲ್ 2021, 18:24 IST
ಅಕ್ಷರ ಗಾತ್ರ

ಪುತ್ತೂರು: ಪರಿಶಿಷ್ಟ ಪಂಗಡದ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಸಂಪ್ಯ ಠಾಣೆಗೆ ಶರಣಾದ ಚಿತ್ರನಟ ವಿನೋದ್ ಆಳ್ವ ಅವರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಅವರಿಗೆ ಮಧ್ಯಂತರ ಜಾಮೀನು ನೀಡಿದೆ.

ಪಡುವನ್ನೂರು ಗ್ರಾಮದ ಪದಡ್ಕ ನಿವಾಸಿ ಉದಯ್ ನಾಯ್ಕ ಮೇಲೆ ಹಲ್ಲೆ ನಡೆಸಿದ ಆರೋಪದಡಿ ವಿನೋದ್ ಆಳ್ವ ಸೇರಿ ಇಬ್ಬರ ವಿರುದ್ಧ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪಡುಮಲೆ ನಾಗಬೆರ್ಮರ ಸಾನ್ನಿಧ್ಯಕ್ಕೆ ಹೋಗುವ ರಸ್ತೆ ಕಾಮಗಾರಿ ವೇಳೆ ಅಹವಾಲು ಹೇಳಿ
ಕೊಂಡಿದ್ದಕ್ಕೆ ಅವರು ಹಲ್ಲೆನಡೆಸಿ, ಅವಾಚ್ಯ ಪದಗಳಿಂದ ನಿಂದಿಸಿರು
ವುದಾಗಿ ಉದಯ್ ದೂರು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT