<p><strong>ಮಂಗಳೂರು:</strong> ಕೇರಳದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಪ್ರತ್ಯೇಕ ಮಾರ್ಗಸೂಚಿ ಸಿದ್ಧಪಡಿಸಲು ಜಿಲ್ಲಾಡಳಿತ ನಿರ್ಧರಿಸಿದೆ.</p>.<p>ದಕ್ಷಿಣ ಕನ್ನಡ ಜಿಲ್ಲೆಯಿಂದ ಕಾಸರಗೋಡಿಗೆ ಸಂಚರಿಸುವ ಸರ್ಕಾರಿ, ಖಾಸಗಿ ಬಸ್ಗಳನ್ನು ಆಗಸ್ಟ್ 1 ರಿಂದ ಒಂದು ವಾರ ಸ್ಥಗಿತಗೊಳಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಶನಿವಾರ ನಿರ್ಧರಿಸಿದೆ.</p>.<p>‘ಕೇರಳದಿಂದ ಜಿಲ್ಲೆಗೆ ಬರುವವರ ಸಂಖ್ಯೆ ಏರಿದೆ. ಲಸಿಕೆ ಪಡೆದವರು, ನೆಗೆಟಿವ್ ವರದಿ ಇರುವವರಿಗೆ ಪ್ರವೇಶಾವಕಾಶವಿದೆ. ಮತ್ತಷ್ಟು ನಿಯಮಗಳ ಜಾರಿ ಕುರಿತು ವರದಿ ಸಲ್ಲಿಸಲಿದ್ದು, ಸರ್ಕಾರದ ಸೂಚನೆ ಆಧರಿಸಿ ಮಾರ್ಗಸೂಚಿ ರೂಪಿಸಲಾಗುವುದು’ ಎಂದು ಜಿಲ್ಲಾಧಿಕಾರಿಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.</p>.<p>‘ಧಾರ್ಮಿಕ ಕ್ಷೇತ್ರಗಳಿಗೆ ಬರುವ ಜನರ ನಿಯಂತ್ರಣ, ಅಂತರ ರಾಜ್ಯ ಬಸ್ಗಳ ಸಂಚಾರ, ಬೇರೆ ರಾಜ್ಯದಿಂದ ಬರುವ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚುವರಿ ನಿಯಮಗಳನ್ನು ಹಾಕುವ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಚರ್ಚಿಸಲಾಗುತ್ತಿದೆ’ ಎಂದು ಡಾ.ರಾಜೇಂದ್ರ ತಿಳಿಸಿದ್ದಾರೆ.</p>.<p>‘ತಲಪಾಡಿ ಮತ್ತು ಕಾಸರಗೋಡು ಜಿಲ್ಲೆಯ ಗಡಿಯ ಚೆಕ್ಪೋಸ್ಟ್ಗಳಲ್ಲಿ ಆರ್ಟಿಪಿಸಿಆರ್ ತಪಾಸಣೆ ಕೇಂದ್ರ ಆರಂಭಿಸಲಾಗಿದೆ. ನೆಗೆಟಿವ್ ವರದಿ ಇಲ್ಲದವರ ಗಂಟಲುದ್ರವ ಸಂಗ್ರಹಿಸುತ್ತಿದ್ದು, ವರದಿ ಬರುವವರೆಗೆ ಪ್ರತ್ಯೇಕವಾಗಿರಲು ಸೂಚಿಸಲಾಗುತ್ತಿದೆ’ ಎಂದು ಆರೋಗ್ಯಾಧಿಕಾರಿ ಡಾ.ಕಿಶೋರ್ಕುಮಾರ್ತಿಳಿಸಿದ್ದಾರೆ.</p>.<p>ಈ ಮಧ್ಯೆ ಆಗಸ್ಟ್ ಮೊದಲ ವಾರದಲ್ಲಿ ಆರಂಭ ಆಗುತ್ತಿರುವ ಮಂಗಳೂರು ವಿಶ್ವವಿದ್ಯಾಲಯದ ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮತ್ತೆ ಮುಂದೂಡುವಂತೆ ಒತ್ತಾಯಗಳು ಆರಂಭವಾಗಿವೆ.</p>.<p><strong>ಕೇರಳದಲ್ಲಿ ವಾರಾಂತ್ಯ ಕರ್ಫ್ಯೂ:</strong> ಕೇರಳದಲ್ಲಿ ವಾರಾಂತ್ಯದ ಕರ್ಫ್ಯೂ ಇರುವುದರಿಂದ ಶನಿವಾರ ಗಡಿಭಾಗದಲ್ಲಿ ವಾಹನಗಳ ಸಂಖ್ಯೆ ಕಡಿಮೆಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಕೇರಳದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಪ್ರತ್ಯೇಕ ಮಾರ್ಗಸೂಚಿ ಸಿದ್ಧಪಡಿಸಲು ಜಿಲ್ಲಾಡಳಿತ ನಿರ್ಧರಿಸಿದೆ.</p>.<p>ದಕ್ಷಿಣ ಕನ್ನಡ ಜಿಲ್ಲೆಯಿಂದ ಕಾಸರಗೋಡಿಗೆ ಸಂಚರಿಸುವ ಸರ್ಕಾರಿ, ಖಾಸಗಿ ಬಸ್ಗಳನ್ನು ಆಗಸ್ಟ್ 1 ರಿಂದ ಒಂದು ವಾರ ಸ್ಥಗಿತಗೊಳಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಶನಿವಾರ ನಿರ್ಧರಿಸಿದೆ.</p>.<p>‘ಕೇರಳದಿಂದ ಜಿಲ್ಲೆಗೆ ಬರುವವರ ಸಂಖ್ಯೆ ಏರಿದೆ. ಲಸಿಕೆ ಪಡೆದವರು, ನೆಗೆಟಿವ್ ವರದಿ ಇರುವವರಿಗೆ ಪ್ರವೇಶಾವಕಾಶವಿದೆ. ಮತ್ತಷ್ಟು ನಿಯಮಗಳ ಜಾರಿ ಕುರಿತು ವರದಿ ಸಲ್ಲಿಸಲಿದ್ದು, ಸರ್ಕಾರದ ಸೂಚನೆ ಆಧರಿಸಿ ಮಾರ್ಗಸೂಚಿ ರೂಪಿಸಲಾಗುವುದು’ ಎಂದು ಜಿಲ್ಲಾಧಿಕಾರಿಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.</p>.<p>‘ಧಾರ್ಮಿಕ ಕ್ಷೇತ್ರಗಳಿಗೆ ಬರುವ ಜನರ ನಿಯಂತ್ರಣ, ಅಂತರ ರಾಜ್ಯ ಬಸ್ಗಳ ಸಂಚಾರ, ಬೇರೆ ರಾಜ್ಯದಿಂದ ಬರುವ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚುವರಿ ನಿಯಮಗಳನ್ನು ಹಾಕುವ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಚರ್ಚಿಸಲಾಗುತ್ತಿದೆ’ ಎಂದು ಡಾ.ರಾಜೇಂದ್ರ ತಿಳಿಸಿದ್ದಾರೆ.</p>.<p>‘ತಲಪಾಡಿ ಮತ್ತು ಕಾಸರಗೋಡು ಜಿಲ್ಲೆಯ ಗಡಿಯ ಚೆಕ್ಪೋಸ್ಟ್ಗಳಲ್ಲಿ ಆರ್ಟಿಪಿಸಿಆರ್ ತಪಾಸಣೆ ಕೇಂದ್ರ ಆರಂಭಿಸಲಾಗಿದೆ. ನೆಗೆಟಿವ್ ವರದಿ ಇಲ್ಲದವರ ಗಂಟಲುದ್ರವ ಸಂಗ್ರಹಿಸುತ್ತಿದ್ದು, ವರದಿ ಬರುವವರೆಗೆ ಪ್ರತ್ಯೇಕವಾಗಿರಲು ಸೂಚಿಸಲಾಗುತ್ತಿದೆ’ ಎಂದು ಆರೋಗ್ಯಾಧಿಕಾರಿ ಡಾ.ಕಿಶೋರ್ಕುಮಾರ್ತಿಳಿಸಿದ್ದಾರೆ.</p>.<p>ಈ ಮಧ್ಯೆ ಆಗಸ್ಟ್ ಮೊದಲ ವಾರದಲ್ಲಿ ಆರಂಭ ಆಗುತ್ತಿರುವ ಮಂಗಳೂರು ವಿಶ್ವವಿದ್ಯಾಲಯದ ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮತ್ತೆ ಮುಂದೂಡುವಂತೆ ಒತ್ತಾಯಗಳು ಆರಂಭವಾಗಿವೆ.</p>.<p><strong>ಕೇರಳದಲ್ಲಿ ವಾರಾಂತ್ಯ ಕರ್ಫ್ಯೂ:</strong> ಕೇರಳದಲ್ಲಿ ವಾರಾಂತ್ಯದ ಕರ್ಫ್ಯೂ ಇರುವುದರಿಂದ ಶನಿವಾರ ಗಡಿಭಾಗದಲ್ಲಿ ವಾಹನಗಳ ಸಂಖ್ಯೆ ಕಡಿಮೆಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>