ಶನಿವಾರ, ಮಾರ್ಚ್ 25, 2023
23 °C

ಬ್ರಿಟಿಷರಿಗೆ ಶರಣಾಗತಿ ಪತ್ರ ನೀಡಿದವರು ಸ್ವಾತಂತ್ರ್ಯ ಯೋಧರೇ?: ಐವನ್‌ ಪ್ರಶ್ನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ‘ಬ್ರಿಟಿಷರಿಗೆ 6 ಬಾರಿ ಶರಣಾಗತಿಯ ಪತ್ರ ಬರೆದ ವಿನಾಯಕ ದಾಮೋದರ ಸಾವರ್ಕರ್ ಸ್ವಾತಂತ್ರ ಯೋಧರಾಗಲು ಹೇಗೆ ಸಾಧ್ಯ? ಅವರಿಗೆ ಭಾರತ ರತ್ನ ಏಕೆ ಕೊಡಬೇಕು ?’ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಪ್ರಶ್ನಿಸಿದರು.

ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಾರ್ವಕರ್ ಜೈಲು ಸೇರಿದ ಎರಡು ವಾರದಲ್ಲಿ ಆರು ಬಾರಿ ಶರಣಾಗತಿ ಪತ್ರವನ್ನು ನೀಡಿದ್ದಾರೆ. ಅಂತಹ ಸಾವರ್ಕರ್ ಬಗ್ಗೆ ಬಿಜೆಪಿಗೆ ದಿಢೀರ್ ಪ್ರೀತಿ ಹುಟ್ಟಲು ಕಾರಣವೇನು?’ ಎಂದರು.

‘ಈವರೆಗೂ ಸಾವರ್ಕರ್ ಪರ ಮಾತನಾಡದ ಬಿಜೆಪಿಯು ಈಗ ಬೊಬ್ಬೆ ಹೊಡೆಯುತ್ತಿದೆ. ಮರಾಠಿ ಬ್ರಾಹ್ಮಣರಾದ ಸಾವರ್ಕರ್‌ಗೆ ‘ಭಾರತ ರತ್ನ’ ಕೊಡುವ ಬಗ್ಗೆ ಪ್ರಸ್ತಾಪಿಸಿ ಜನರ ಭಾವನೆಯನ್ನು ಎತ್ತಿ ಕಟ್ಟಲು ಬಿಜೆಪಿ ಮುಂದಾಗಿದೆ. ಮಹಾರಾಷ್ಟ್ರದ ಚುನಾವಣೆಯ ಮೇಲೆ ಬಿಜೆಪಿ ಕಣ್ಣಿಟ್ಟು, ಹೀಗೆ ಮಾಡಿದೆ’ ಎಂದು ದೂರಿದರು.

ಇದನ್ನೂ ಓದಿ... ಸಾರ್ವಕರ್‌ಗೆ ಭಾರತ ರತ್ನ; ವಿರೋಧ ಸರಿಯಲ್ಲ: ವಿಶ್ವೇಶತೀರ್ಥ ಸ್ವಾಮೀಜಿ

‘ಸಾವರ್ಕರ್ ಬದಲು ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ಕೊಡಬೇಕು’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿರುವುದರಲ್ಲಿ ತಪ್ಪೇನಿದೆ? ಸಿದ್ದಗಂಗಾ ಶ್ರೀಗಳು ಅರ್ಹರಾಗಿದ್ದಾರೆ. ಆದರೆ, ಬಿಜೆಪಿಗರಿಗೆ ಅದು ಇಷ್ಟವಿಲ್ಲ. ಸಾವರ್ಕರ್ ಹೆಸರು ತೇಲಿಬಿಟ್ಟು ಜನರ ಭಾವನೆ ಕೆದಕುತ್ತಿದೆ’ ಎಂದರು.

‘ದೇಶ ವಿಭಜನೆಗೆ ಮೊದಲ ಮೊಳೆ ಹೊಡೆದ ಸಾವರ್ಕರ್‌ಗೆ ಭಾರತ ರತ್ನ ನೀಡಬೇಕೋ, ಬೇಡವೋ ಎಂಬ ಬಗ್ಗೆ ಚರ್ಚೆಯಾಗಲಿ. ಕಾಂಗ್ರೆಸ್ ಚರ್ಚೆಗೆ ಸಿದ್ಧವಿದೆ’ ಎಂದರು.

‘ಬಿಜೆಪಿಯು ಇತಿಹಾಸ ತಿರುಚಲು ಹೊರಟಿದೆ. ಮೋದಿ ಬಂದ ಬಳಿಕವೇ ಭಾರತಕ್ಕೆ ಇತಿಹಾಸ ಎಂಬಂತೆ ಬಿಂಬಿಸಲು ಹೊರಟಿದೆ. ದೇಶಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಲು ಬಿಜೆಪಿ ಹೊರಟಿದೆ’ ಎಂದರು. 

ಇದನ್ನೂ ಓದಿ... ಸಿದ್ಧಗಂಗಾ ಶ್ರೀಗೆ ಭಾರತ ರತ್ನ ಕೊಡಿ: ಸಿದ್ದರಾಮಯ್ಯ

‘ಬಿಜೆಪಿಗೆ ಚುನಾವಣೆಯ ಸಂದರ್ಭ ರಾಷ್ಟ್ರಪ್ರೇಮಿಗಳು ರಾಷ್ಟ್ರದ್ರೋಹಿಗಳಂತೆ ಮತ್ತು ಚುನಾವಣೆಯ ಬಳಿಕ ರಾಷ್ಟ್ರದ್ರೋಹಿಗಳು ರಾಷ್ಟ್ರಪ್ರೇಮಿಗಳಂತೆ ಕಾಣುತ್ತಿರುವುದು ವಿಪರ್ಯಾಸ. ಅಭಿವೃದ್ಧಿ ಹಾಗೂ ಆಡಳಿತ ವೈಫಲ್ಯವನ್ನು ಮರೆಮಾಚುವ ಸಲುವಾಗಿ ಬಿಜೆಪಿಯು ಭಾವನಾತ್ಮಕ ವಿಚಾರ ತೇಲಿ ಬಿಡುತ್ತಿದೆ’ ಎಂದು ದೂರಿದರು.

ಮಾಜಿ ಮೇಯರ್ ಕವಿತಾ ಸನಿಲ್, ಪಕ್ಷದ ಮುಖಂಡರಾದ ಜಯಶೀಲಾ ಅಡ್ಯಂತಾಯ, ಪಿಯೂಸ್ ಮೊಂತೆರೋ, ಸದಾಶಿವ ಶೆಟ್ಟಿ, ನಝೀರ್ ಬಜಾಲ್, ಭಾಸ್ಕರ ರಾವ್, ನಾರಾಯಣ ಕೋಟ್ಯಾನ್ ಇದ್ದರು.

ಇನ್ನಷ್ಟು... 

‘ಸಾವರ್ಕರ್, ಗೋಡ್ಸೆ ಬಗ್ಗೆ ಹಗುರವಾಗಿ ಮಾತನಾಡುವ ಸಿದ್ದರಾಮಯ್ಯ ಭೂಮಿ ಮೇಲಿರಬಾರದು’

ಸಾವರ್ಕರ್ ಪ್ರಧಾನಿಯಾಗಿದ್ದರೆ ಪಾಕಿಸ್ತಾನವೇ ದಯಿಸುತ್ತಿರಲಿಲ್ಲ: ಉದ್ಧವ್ ಠಾಕ್ರೆ

ಗಾಂಧಿ ಹತ್ಯೆ ಸಂಚಿನಲ್ಲಿ ಸಾವರ್ಕರ್ ಹೆಸರಿತ್ತು, ಮರೆಯಬೇಡಿ: ದಿಗ್ವಿಜಯ್ ಸಿಂಗ್

ಅಂಬೇಡ್ಕರ್‌ಗೆ ಭಾರತರತ್ನ ನಿರಾಕರಿಸಿದವರಿಂದಲೇ ಸಾವರ್ಕರ್‌ಗೆ ಅವಮಾನ

ಭಾರತ ರತ್ನ-ರಾಜ್ಯೋತ್ಸವ ಪ್ರಶಸ್ತಿ | ಸಿದ್ದರಾಮಯ್ಯ VS ಸಿ.ಟಿ.ರವಿ ಟ್ವೀಟ್‌ ವಾರ್‌

‘ಸಾವರ್ಕರ್, ಗೋಡ್ಸೆ ಬಗ್ಗೆ ಹಗುರವಾಗಿ ಮಾತನಾಡುವ ಸಿದ್ದರಾಮಯ್ಯ ಭೂಮಿ ಮೇಲಿರಬಾರದು’

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು