ಮಂಗಳೂರು: ಕೋವಿಡ್–19 ನಿಂದ ಮೃತಪಟ್ಟವರ ಕುಟುಂಬಗಳಿಗೆ ತಲಾ ₹1 ಲಕ್ಷ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿ, ಬಹಳ ಸಮಯವಾದರೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಈ ಬಗ್ಗೆ ನಿರ್ದೇಶನವೇ ಬಂದಿಲ್ಲ. ಸಾವಿನ ಆಡಿಟ್ ಕೂಡ ಆಗಿಲ್ಲ. ಕೂಡಲೇ ಎಷ್ಟು ಮಂದಿ ಈ ಪರಿಹಾರ ಪಡೆಯಲು ಅರ್ಹರು ಎಂಬ ಮಾಹಿತಿಯನ್ನು ಜಿಲ್ಲಾಡಳಿತ ನೀಡಬೇಕು. ಇಲ್ಲದಿದ್ದರೆ ಕೋರ್ಟ್ ಮೊರೆ ಹೋಗುವುದಾಗಿ ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ ಎಚ್ಚರಿಸಿದರು.