‘ಶಾಂತಿ ಪ್ರಕಾಶನವು ‘ಪ್ರವಾದಿ ಮುಹಮ್ಮದ್ ಸಮಗ್ರ ವ್ಯಕ್ತಿತ್ವ’ ಮತ್ತು ‘ಪ್ರವಾದಿ ಮುಹಮ್ಮದ್: ವಿವಾಹಗಳು ಮತ್ತು ವಿಮರ್ಶೆಗಳು' ಎಂಬ ಕೃತಿಗಳನ್ನು ಪ್ರಕಟಿಸಿದೆ. ವಿವಿಧ ಕಡೆಗಳಲ್ಲಿ ವೃದ್ಧಾಶ್ರಮ ಭೇಟಿ, ಹಿರಿಯರಿಗೆ ಸನ್ಮಾನ, ಆಸ್ಪತ್ರೆ ಭೇಟಿ, ಶುಚಿತ್ವ ಅಭಿಯಾನ, ರಕ್ತದಾನ ಶಿಬಿರ, ಗಿಡ ನೆಡುವಂತಹ ಸೇವಾ ಕಾರ್ಯಗಳನ್ನು, ಸೀರತ್, ಪ್ರವಚನ, ವಿಚಾರಗೋಷ್ಠಿ, ಚರ್ಚಾಗೋಷ್ಠಿ, ಪ್ರಬಂಧ ಮತ್ತು ಭಾಷಣ ಸ್ಪರ್ಧೆಗಳನ್ನು ಅಭಿಯಾನದಡಿ ಹಮ್ಮಿಕೊಳ್ಳಲಾಗಿದೆ‘ ಎಂದರು.