<p><strong>ಮುಡಿಪು</strong>: ಮೂಡುಬಿದಿರೆಯಲ್ಲಿ ನಡೆಯಲಿರುವ ‘ಜಾಂಬೂರಿ’ಯ ಪೂರ್ವಸಿದ್ಧತೆ ಕುರಿತು ಉಳ್ಳಾಲ ತಾಲ್ಲೂಕು ವ್ಯಾಪ್ತಿಗೆ ಸಂಬಂಧಿಸಿ ಸಮಾಲೋಚನಾ ಸಭೆ ಇತ್ತೀಚೆಗೆ ಅಸೈಗೋಳಿಯ ಬಂಟರ ಭವನದಲ್ಲಿ ನಡೆಯಿತು.</p>.<p>ಶಾಸಕ ಯು. ಟಿ. ಖಾದರ್ ಮಾತನಾಡಿ, ‘ಜಾಂಬೂರಿಯು ಕರಾವಳಿ ಗೌರವನ್ನು ಹೆಚ್ಚಿಸುವ ಕಾರ್ಯಕ್ರಮವಾಗಿದೆ. ಪ್ರಥಮ ಬಾರಿಗೆ ನಮ್ಮ ದೇಶದಲ್ಲಿ ನಡೆತ್ತಿದ್ದು, ಸರ್ವರೂ ಸಹಕಾರ ನೀಡಬೇಕು’ ಎಂದರು.</p>.<p>ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ ಮಾತನಾಡಿ, ‘ ಮೂಡುಬಿದಿರೆಯ ಜಾಂಬೂರಿಯು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವುದರಲ್ಲಿ ಎರಡು ಮಾತಿಲ್ಲ’ ಎಂದರು.</p>.<p>ಡಾ. ಮೋಹನ್ ಆಳ್ವ ಮಾತನಾಡಿ, ‘ಈ ಬಾರಿಯ ಜಾಂಬೂರಿಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳಿದ್ದು, ಗಿನ್ನಿಸ್ ದಾಖಲೆ ಆಗುವ ಸಾಧ್ಯತೆ ಇದೆ’ ಎಂದರು</p>.<p>ಜಾಂಬೂರಿ ತಾಲ್ಲೂಕು ಸಮಿತಿ ರಚಿಸಲಾಯಿತು. ಸತೀಶ್ ಕುಂಪಲ ಅವರು ಹೊರೆಕಾಣಿಕೆ ಕುರಿತು ಮಾಹಿತಿ ನೀಡಿದರು.</p>.<p>ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸುಬ್ರಹ್ಮಣ್ಯ ಯಪಡಿತ್ತಾಯ, ಮಾಜಿ ಸಚಿವ ನಾಗರಾಜ ಶೆಟ್ಟಿ, ಸೈಯದ್ ಮದನಿ ದರ್ಗಾದ ಅಧ್ಯಕ್ಷ ಅಬ್ದುಲ್ ರಶೀದ್, ಪ್ರಮುಖರಾದ ಈಶ್ವರ್, ಚಂದ್ರಹಾಸ್ ಅಡ್ಯಾಂತಾಯ, ಡಾ. ಪ್ರಶಾಂತ್ ಕುಮಾರ್, ಎಂ.ಜಿ ಕಜೆ, ಎಂ.ಎಚ್ ಮಲ್ಲಾರ್, ಜಗದೀಶ್ ಶೆಟ್ಟಿ , ರವೀಂದ್ರ ರೈ, ಜಾಂಬೂರಿ ಉಳ್ಳಾಲ ತಾಲೂಕು ಘಟಕದ ಅಧ್ಯಕ್ಷ ಪ್ರಸಾದ್ ರೈ ಕಲ್ಲಿಮಾರ್, ಪ್ರಚಾರ ಸಮಿತಿ ಮುಖ್ಯಸ್ಥ ತ್ಯಾಗಂ ಹರೇಕಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಡಿಪು</strong>: ಮೂಡುಬಿದಿರೆಯಲ್ಲಿ ನಡೆಯಲಿರುವ ‘ಜಾಂಬೂರಿ’ಯ ಪೂರ್ವಸಿದ್ಧತೆ ಕುರಿತು ಉಳ್ಳಾಲ ತಾಲ್ಲೂಕು ವ್ಯಾಪ್ತಿಗೆ ಸಂಬಂಧಿಸಿ ಸಮಾಲೋಚನಾ ಸಭೆ ಇತ್ತೀಚೆಗೆ ಅಸೈಗೋಳಿಯ ಬಂಟರ ಭವನದಲ್ಲಿ ನಡೆಯಿತು.</p>.<p>ಶಾಸಕ ಯು. ಟಿ. ಖಾದರ್ ಮಾತನಾಡಿ, ‘ಜಾಂಬೂರಿಯು ಕರಾವಳಿ ಗೌರವನ್ನು ಹೆಚ್ಚಿಸುವ ಕಾರ್ಯಕ್ರಮವಾಗಿದೆ. ಪ್ರಥಮ ಬಾರಿಗೆ ನಮ್ಮ ದೇಶದಲ್ಲಿ ನಡೆತ್ತಿದ್ದು, ಸರ್ವರೂ ಸಹಕಾರ ನೀಡಬೇಕು’ ಎಂದರು.</p>.<p>ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ ಮಾತನಾಡಿ, ‘ ಮೂಡುಬಿದಿರೆಯ ಜಾಂಬೂರಿಯು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವುದರಲ್ಲಿ ಎರಡು ಮಾತಿಲ್ಲ’ ಎಂದರು.</p>.<p>ಡಾ. ಮೋಹನ್ ಆಳ್ವ ಮಾತನಾಡಿ, ‘ಈ ಬಾರಿಯ ಜಾಂಬೂರಿಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳಿದ್ದು, ಗಿನ್ನಿಸ್ ದಾಖಲೆ ಆಗುವ ಸಾಧ್ಯತೆ ಇದೆ’ ಎಂದರು</p>.<p>ಜಾಂಬೂರಿ ತಾಲ್ಲೂಕು ಸಮಿತಿ ರಚಿಸಲಾಯಿತು. ಸತೀಶ್ ಕುಂಪಲ ಅವರು ಹೊರೆಕಾಣಿಕೆ ಕುರಿತು ಮಾಹಿತಿ ನೀಡಿದರು.</p>.<p>ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸುಬ್ರಹ್ಮಣ್ಯ ಯಪಡಿತ್ತಾಯ, ಮಾಜಿ ಸಚಿವ ನಾಗರಾಜ ಶೆಟ್ಟಿ, ಸೈಯದ್ ಮದನಿ ದರ್ಗಾದ ಅಧ್ಯಕ್ಷ ಅಬ್ದುಲ್ ರಶೀದ್, ಪ್ರಮುಖರಾದ ಈಶ್ವರ್, ಚಂದ್ರಹಾಸ್ ಅಡ್ಯಾಂತಾಯ, ಡಾ. ಪ್ರಶಾಂತ್ ಕುಮಾರ್, ಎಂ.ಜಿ ಕಜೆ, ಎಂ.ಎಚ್ ಮಲ್ಲಾರ್, ಜಗದೀಶ್ ಶೆಟ್ಟಿ , ರವೀಂದ್ರ ರೈ, ಜಾಂಬೂರಿ ಉಳ್ಳಾಲ ತಾಲೂಕು ಘಟಕದ ಅಧ್ಯಕ್ಷ ಪ್ರಸಾದ್ ರೈ ಕಲ್ಲಿಮಾರ್, ಪ್ರಚಾರ ಸಮಿತಿ ಮುಖ್ಯಸ್ಥ ತ್ಯಾಗಂ ಹರೇಕಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>