<p><strong>ಮಂಗಳೂರು: </strong>ದೇಶದಲ್ಲಿ ಈಗ ಆರ್ಥಿಕ ಮತ್ತು ಸಾಮಾಜಿಕ ಭಯೋತ್ಪಾದನೆ ಯುಗ ಆರಂಭವಾಗಿದೆ ಎಂದು ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಕಳವಳ ವ್ಯಕ್ತಪಡಿಸಿದರು.</p>.<p>ಅಭಿಮತ ಸಂಘಟನೆಯು ಮಂಗಳೂರಿನ ಶಾಂತಿ ಕಿರಣದಲ್ಲಿ ಆಯೋಜಿಸಿರುವ ಎರಡು ದಿನಗಳ <strong>ಜನನುಡಿ- 2018</strong> ಅನ್ನು ಎಚ್.ಎನ್.ನಾಗಮೋಹನ ದಾಸ್ ಶನಿವಾರ ಉದ್ಘಾಟಿಸಿ ಮಾತನಾಡಿದರು.</p>.<p>ಸಂಪತ್ತಿನ ಶೇಖರಣೆಗೆ ಸರ್ಕಾರವೇ ಬೆಂಬಲ ನೀಡುತ್ತಿದೆ. ಜನರ ಸಂಪತ್ತಿನ ರಕ್ಷಣೆ ಮಾಡಬೇಕಾದ ಬ್ಯಾಂಕ್ಗಳು ಲೂಟಿಕೋರರ ಬೆಂಬಲಕ್ಕೆ ನಿಂತಿವೆ ಎಂದರು.</p>.<p>ಸಂವಿಧಾನೇತರ ಶಕ್ತಿಗಳು ಜನರ ಬದುಕನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿವೆ. ಏಕ ಸಂಸ್ಕೃತಿಯನ್ನು ಪ್ರತಿಪಾದಿಸುತ್ತಿರುವ ಈ ಶಕ್ತಿಗಳು ಬಹುತ್ವವನ್ನು ನಾಶ ಮಾಡಲು ಪ್ರಯತ್ನಿಸುತ್ತಿವೆ. ಆಹಾರ, ಉಡುಗೆ, ಸಂಚಾರ ಎಲ್ಲವನ್ನೂ ನಿಯಂತ್ರಿಸುವ ಪ್ರಯತ್ನಕ್ಕೆ ಅಧಿಕಾರದಲ್ಲಿ ಕುಳಿತವರು ಬೆಂಬಲಿಸುತ್ತಿರುವುದು ಅಪಾಯಕಾರಿ ಎಂದು ಕಳವಳ ವ್ಯಕ್ತಪಡಿಸಿದರು.</p>.<p>'ಹಿಂದೆ ಸಂವಿಧಾನೇತರ ಶಕ್ತಿಗಳು ಕ್ರೈಸ್ತರ, ಮುಸ್ಲಿಮರ, ದಲಿತರ ಮೇಲೆ ದಾಳಿ ಮಾಡಿದವು. ಆಗ ಜನರು ಸುಮ್ಮನಿದ್ದರು. ಆದರೆ ಈಗ ಸಂವಿಧಾನದ ಮೇಲೆ ಆ ಶಕ್ತಿಗಳು ದಾಳಿ ಮಾಡುತ್ತಿವೆ. ಇದರಿಂದ ಇಡೀ ದೇಶ ಬಿಕ್ಕಟ್ಟಿನಲ್ಲಿದೆ' ಎಂದರು.</p>.<p><strong>ಇದನ್ನೂ ಓದಿ:</strong><a href="https://cms.prajavani.net/district/dakshina-kannada/jananudi-program-hindu-jagaran-591196.html" target="_blank">ಜನನುಡಿಗೆ ಅಡ್ಡಿಪಡಿಸಲು ಯತ್ನ ಆರೋಪ: ನಾಲ್ವರು ‘ಹಿಂಜಾವೇ’ ಕಾರ್ಯಕರ್ತರು ವಶಕ್ಕೆ</a></p>.<p>‘ನ್ಯಾಯಾಂಗದ ಮೇಲೂ ಬಾಹ್ಯ ಒತ್ತಡ ಹೇರಲಾಗುತ್ತಿದೆ. ಇದೇ ರೀತಿಯ ತೀರ್ಪು ನೀಡಬೇಕು, ವಿರುದ್ಧವಾದ ತೀರ್ಪು ನೀಡಿದರೆ ಒಪ್ಪುವುದಿಲ್ಲ ಎಂಬ ಬೆದರಿಕೆಗಳನ್ನು ಹಾಕಲಾಗುತ್ತಿದೆ. ಅಯೋಧ್ಯೆಯ ಪ್ರಕರಣದಲ್ಲೂ ಹೀಗೆಯೇ ಮಾಡಲಾಗುತ್ತಿದೆ’ ಎಂದು ಹೇಳಿದರು.<br />ಪ್ರಜಾಪ್ರಭುತ್ವ ಆಧಾರ ಸ್ತಂಭಗಳಂತೆ ಇರುವ ಸಂಸ್ಥೆಗಳನ್ನು ನಾಶ ಮಾಡುವ ಪ್ರಯತ್ನ ಆರಂಭವಾಗಿದೆ. ಭಿನ್ನ ಧ್ವನಿಗಳನ್ನು ಅಡಗಿಸಲು ಅಧಿಕಾರವನ್ನು ದುರ್ಬಳಕೆ ಮಾಡಲಾಗುತ್ತಿದೆ ಎಂದರು.</p>.<p>ಆರ್ಥಿಕ ಮತ್ತು ಸಾಮಾಜಿಕ ಭಯೋತ್ಪಾದನೆಗೆ ಕಡಿವಾಣ ಹಾಕದಿದ್ದರೆ ದೇಶ ಅರಾಜಕತೆಯತ್ತ ಸಾಗುವ ಸಂಭವವಿದೆ. ಆಗ ಇಡೀ ರಾಷ್ಟ್ರ ಮೂಲಭೂತವಾದಿಗಳು ಮತ್ತು ಕೋಮುವಾದಿಗಳ ಕೈಗೆ ಸಿಲುಕುತ್ತದೆ. ಇಂತಹ ಅಪಾಯ ಎದುರಾಗದಂತೆ ಜನರು ಎಚ್ಚರ ವಹಿಸಬೇಕು ಎಂದು ಕರೆ ನೀಡಿದರು.</p>.<p>ಬಹುಭಾಷಾ ನಟ ಪ್ರಕಾಶ್ ರೈ, ಲೇಖಕಿ ಡಾ.ಹಸೀನಾ ಖಾದ್ರಿ, ದಲಿತ ಸಂಘರ್ಷ ಸಮಿತಿ ಮುಖಂಡ ಎಂ.ದೇವದಾಸ್ ವೇದಿಕೆಯಲ್ಲಿದ್ದಾರೆ. ಬರಹಗಾರ್ತಿ ವಿನಯಾ ಒಕ್ಕುಂದ ಅಧ್ಯಕ್ಷತೆ ವಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ದೇಶದಲ್ಲಿ ಈಗ ಆರ್ಥಿಕ ಮತ್ತು ಸಾಮಾಜಿಕ ಭಯೋತ್ಪಾದನೆ ಯುಗ ಆರಂಭವಾಗಿದೆ ಎಂದು ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಕಳವಳ ವ್ಯಕ್ತಪಡಿಸಿದರು.</p>.<p>ಅಭಿಮತ ಸಂಘಟನೆಯು ಮಂಗಳೂರಿನ ಶಾಂತಿ ಕಿರಣದಲ್ಲಿ ಆಯೋಜಿಸಿರುವ ಎರಡು ದಿನಗಳ <strong>ಜನನುಡಿ- 2018</strong> ಅನ್ನು ಎಚ್.ಎನ್.ನಾಗಮೋಹನ ದಾಸ್ ಶನಿವಾರ ಉದ್ಘಾಟಿಸಿ ಮಾತನಾಡಿದರು.</p>.<p>ಸಂಪತ್ತಿನ ಶೇಖರಣೆಗೆ ಸರ್ಕಾರವೇ ಬೆಂಬಲ ನೀಡುತ್ತಿದೆ. ಜನರ ಸಂಪತ್ತಿನ ರಕ್ಷಣೆ ಮಾಡಬೇಕಾದ ಬ್ಯಾಂಕ್ಗಳು ಲೂಟಿಕೋರರ ಬೆಂಬಲಕ್ಕೆ ನಿಂತಿವೆ ಎಂದರು.</p>.<p>ಸಂವಿಧಾನೇತರ ಶಕ್ತಿಗಳು ಜನರ ಬದುಕನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿವೆ. ಏಕ ಸಂಸ್ಕೃತಿಯನ್ನು ಪ್ರತಿಪಾದಿಸುತ್ತಿರುವ ಈ ಶಕ್ತಿಗಳು ಬಹುತ್ವವನ್ನು ನಾಶ ಮಾಡಲು ಪ್ರಯತ್ನಿಸುತ್ತಿವೆ. ಆಹಾರ, ಉಡುಗೆ, ಸಂಚಾರ ಎಲ್ಲವನ್ನೂ ನಿಯಂತ್ರಿಸುವ ಪ್ರಯತ್ನಕ್ಕೆ ಅಧಿಕಾರದಲ್ಲಿ ಕುಳಿತವರು ಬೆಂಬಲಿಸುತ್ತಿರುವುದು ಅಪಾಯಕಾರಿ ಎಂದು ಕಳವಳ ವ್ಯಕ್ತಪಡಿಸಿದರು.</p>.<p>'ಹಿಂದೆ ಸಂವಿಧಾನೇತರ ಶಕ್ತಿಗಳು ಕ್ರೈಸ್ತರ, ಮುಸ್ಲಿಮರ, ದಲಿತರ ಮೇಲೆ ದಾಳಿ ಮಾಡಿದವು. ಆಗ ಜನರು ಸುಮ್ಮನಿದ್ದರು. ಆದರೆ ಈಗ ಸಂವಿಧಾನದ ಮೇಲೆ ಆ ಶಕ್ತಿಗಳು ದಾಳಿ ಮಾಡುತ್ತಿವೆ. ಇದರಿಂದ ಇಡೀ ದೇಶ ಬಿಕ್ಕಟ್ಟಿನಲ್ಲಿದೆ' ಎಂದರು.</p>.<p><strong>ಇದನ್ನೂ ಓದಿ:</strong><a href="https://cms.prajavani.net/district/dakshina-kannada/jananudi-program-hindu-jagaran-591196.html" target="_blank">ಜನನುಡಿಗೆ ಅಡ್ಡಿಪಡಿಸಲು ಯತ್ನ ಆರೋಪ: ನಾಲ್ವರು ‘ಹಿಂಜಾವೇ’ ಕಾರ್ಯಕರ್ತರು ವಶಕ್ಕೆ</a></p>.<p>‘ನ್ಯಾಯಾಂಗದ ಮೇಲೂ ಬಾಹ್ಯ ಒತ್ತಡ ಹೇರಲಾಗುತ್ತಿದೆ. ಇದೇ ರೀತಿಯ ತೀರ್ಪು ನೀಡಬೇಕು, ವಿರುದ್ಧವಾದ ತೀರ್ಪು ನೀಡಿದರೆ ಒಪ್ಪುವುದಿಲ್ಲ ಎಂಬ ಬೆದರಿಕೆಗಳನ್ನು ಹಾಕಲಾಗುತ್ತಿದೆ. ಅಯೋಧ್ಯೆಯ ಪ್ರಕರಣದಲ್ಲೂ ಹೀಗೆಯೇ ಮಾಡಲಾಗುತ್ತಿದೆ’ ಎಂದು ಹೇಳಿದರು.<br />ಪ್ರಜಾಪ್ರಭುತ್ವ ಆಧಾರ ಸ್ತಂಭಗಳಂತೆ ಇರುವ ಸಂಸ್ಥೆಗಳನ್ನು ನಾಶ ಮಾಡುವ ಪ್ರಯತ್ನ ಆರಂಭವಾಗಿದೆ. ಭಿನ್ನ ಧ್ವನಿಗಳನ್ನು ಅಡಗಿಸಲು ಅಧಿಕಾರವನ್ನು ದುರ್ಬಳಕೆ ಮಾಡಲಾಗುತ್ತಿದೆ ಎಂದರು.</p>.<p>ಆರ್ಥಿಕ ಮತ್ತು ಸಾಮಾಜಿಕ ಭಯೋತ್ಪಾದನೆಗೆ ಕಡಿವಾಣ ಹಾಕದಿದ್ದರೆ ದೇಶ ಅರಾಜಕತೆಯತ್ತ ಸಾಗುವ ಸಂಭವವಿದೆ. ಆಗ ಇಡೀ ರಾಷ್ಟ್ರ ಮೂಲಭೂತವಾದಿಗಳು ಮತ್ತು ಕೋಮುವಾದಿಗಳ ಕೈಗೆ ಸಿಲುಕುತ್ತದೆ. ಇಂತಹ ಅಪಾಯ ಎದುರಾಗದಂತೆ ಜನರು ಎಚ್ಚರ ವಹಿಸಬೇಕು ಎಂದು ಕರೆ ನೀಡಿದರು.</p>.<p>ಬಹುಭಾಷಾ ನಟ ಪ್ರಕಾಶ್ ರೈ, ಲೇಖಕಿ ಡಾ.ಹಸೀನಾ ಖಾದ್ರಿ, ದಲಿತ ಸಂಘರ್ಷ ಸಮಿತಿ ಮುಖಂಡ ಎಂ.ದೇವದಾಸ್ ವೇದಿಕೆಯಲ್ಲಿದ್ದಾರೆ. ಬರಹಗಾರ್ತಿ ವಿನಯಾ ಒಕ್ಕುಂದ ಅಧ್ಯಕ್ಷತೆ ವಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>