ಸಂವಿಧಾನೇತರ ಶಕ್ತಿಗಳು ಜನರ ಬದುಕನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿವೆ. ಏಕ ಸಂಸ್ಕೃತಿಯನ್ನು ಪ್ರತಿಪಾದಿಸುತ್ತಿರುವ ಈ ಶಕ್ತಿಗಳು ಬಹುತ್ವವನ್ನು ನಾಶ ಮಾಡಲು ಪ್ರಯತ್ನಿಸುತ್ತಿವೆ. ಆಹಾರ, ಉಡುಗೆ, ಸಂಚಾರ ಎಲ್ಲವನ್ನೂ ನಿಯಂತ್ರಿಸುವ ಪ್ರಯತ್ನಕ್ಕೆ ಅಧಿಕಾರದಲ್ಲಿ ಕುಳಿತವರು ಬೆಂಬಲಿಸುತ್ತಿರುವುದು ಅಪಾಯಕಾರಿ ಎಂದು ಕಳವಳ ವ್ಯಕ್ತಪಡಿಸಿದರು.