<p><strong>ಮಂಗಳೂರು:</strong> ‘ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಇನ್ನೂ ಎರಡು ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಾರೆ' ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ಹೇಳಿದರು.</p>.<p>ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಭಾನುವಾರ ಮಧ್ಯಾಹ್ನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜಾರಿಯವರ ಆಶೀರ್ವಾದ ಪಡೆದರು. ಬಳಿಕ ಪೂಜಾರಿ ಪತ್ರಕರ್ತರ ಜೊತೆ ಮಾತನಾಡಿದರು.</p>.<p>ನಳಿನ್ ಕುಮಾರ್ ಕಟೀಲ್ ಅವರಿಗೆ ದೇವರು ಒಳ್ಳೆಯದು ಮಾಡುತ್ತಾರೆ. ಕಾಂಗ್ರೆಸ್ ಪಕ್ಷದ ಮಿಥುನ್ ರೈ ಕೂಡ ಒಳ್ಳೆಯ ಅಭ್ಯರ್ಥಿ. ಆದರೆ, ಪರಿಸ್ಥಿತಿ ಕಾಂಗ್ರೆಸ್ ಪರವಾಗಿ ಇಲ್ಲ. ಎಂದರು.</p>.<p>ಇಡೀ ದೇಶದಲ್ಲಿ ಮೋದಿ ಪರವಾದ ಒಲವು ಇದೆ. ಅವರಿಗೆ ಕೆಲವು ಪ್ಲಸ್ ಪಾಯಿಂಟ್. ಇದರಿಂದಾಗಿ ಇನ್ನೂ ಎರಡು ಚುನಾವಣೆಯಲ್ಲಿ ಗೆದ್ದು ಬರ್ತಾರೆ ಎಂದು ಹೇಳಿದರು.</p>.<p>ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಗೆಲುವು ಸಾಧಿಸುತ್ತಾರೆ. ಜೆಡಿಎಸ್ ಪಕ್ಷದ ಕುಟುಂಬ ರಾಜಕಾರಣ ತೀರಾ ತಪ್ಪು.</p>.<p>ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜನ ಸರಿಯಾದ ಪಾಠ ಕಲಿಸುತ್ತಾರೆ. ಈ ರಾಜಕಾರಣಿಗಳೆಂದರೆ ಜನರಿಗೆ ಜುಗುಪ್ಸೆ ಉಂಟಾಗಿದೆ ಎಂದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ‘ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಇನ್ನೂ ಎರಡು ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಾರೆ' ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ಹೇಳಿದರು.</p>.<p>ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಭಾನುವಾರ ಮಧ್ಯಾಹ್ನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜಾರಿಯವರ ಆಶೀರ್ವಾದ ಪಡೆದರು. ಬಳಿಕ ಪೂಜಾರಿ ಪತ್ರಕರ್ತರ ಜೊತೆ ಮಾತನಾಡಿದರು.</p>.<p>ನಳಿನ್ ಕುಮಾರ್ ಕಟೀಲ್ ಅವರಿಗೆ ದೇವರು ಒಳ್ಳೆಯದು ಮಾಡುತ್ತಾರೆ. ಕಾಂಗ್ರೆಸ್ ಪಕ್ಷದ ಮಿಥುನ್ ರೈ ಕೂಡ ಒಳ್ಳೆಯ ಅಭ್ಯರ್ಥಿ. ಆದರೆ, ಪರಿಸ್ಥಿತಿ ಕಾಂಗ್ರೆಸ್ ಪರವಾಗಿ ಇಲ್ಲ. ಎಂದರು.</p>.<p>ಇಡೀ ದೇಶದಲ್ಲಿ ಮೋದಿ ಪರವಾದ ಒಲವು ಇದೆ. ಅವರಿಗೆ ಕೆಲವು ಪ್ಲಸ್ ಪಾಯಿಂಟ್. ಇದರಿಂದಾಗಿ ಇನ್ನೂ ಎರಡು ಚುನಾವಣೆಯಲ್ಲಿ ಗೆದ್ದು ಬರ್ತಾರೆ ಎಂದು ಹೇಳಿದರು.</p>.<p>ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಗೆಲುವು ಸಾಧಿಸುತ್ತಾರೆ. ಜೆಡಿಎಸ್ ಪಕ್ಷದ ಕುಟುಂಬ ರಾಜಕಾರಣ ತೀರಾ ತಪ್ಪು.</p>.<p>ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜನ ಸರಿಯಾದ ಪಾಠ ಕಲಿಸುತ್ತಾರೆ. ಈ ರಾಜಕಾರಣಿಗಳೆಂದರೆ ಜನರಿಗೆ ಜುಗುಪ್ಸೆ ಉಂಟಾಗಿದೆ ಎಂದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>