ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಮುಖಂಡ ಮೋನಪ್ಪ ಭಂಡಾರಿ, ‘ಹಿಂದೂಗಳನ್ನು ಅವಹೇಳನ ಮಾಡುವುದು ಕಾಂಗ್ರೆಸ್ಗೆ ಹೊಸತೇನಲ್ಲ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಮನಮೋಹನ್ ಸಿಂಗ್ ... ಎಲ್ಲರೂ ಮಾತನಾಡುವ ಶೈಲಿಯೇ ಹಾಗೆ. ಕಾಂಗ್ರೆಸ್ ನಾಯಕರೆಲ್ಲರೂ ಹಿಂದೂ ವಿರೋಧಿ ನೀತಿಯನ್ನೇ ಅಳವಡಿಸಿಕೊಂಡು ಬಂದವರು. ಆದರೂ ಕೆಲವು ಹಿಂದೂಗಳು ಈಗಲೂ ‘ಕಾಂಗ್ರೆಸ್ ನಮ್ಮದು’ ಎನ್ನುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.