ಈ ಕ್ಷೇತ್ರದಲ್ಲಿ ಕುರುಬರು, ಒಕ್ಕಲಿಗರದ್ದೇ ಪ್ರಾಬಲ್ಯ. ಒಕ್ಕಲಿಗರು ಈ ಬಾರಿಯೂ ಸಾ.ರಾ.ಮಹೇಶ್ ಅವರಿಗೆ ಬೆಂಬಲ ನೀಡಿರುವುದು ಸ್ಪಷ್ಟ. ಜಿಲ್ಲಾ ಪಂಚಾಯಿತಿ ಸದಸ್ಯರಾಗಿರುವ ರವಿಶಂಕರ್ ಅವರು ರಾಜ್ಯ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಪ್ರಚಾರ ನಡೆಸಿದ್ದರು. ರವಿಶಂಕರ್ ಅವರ ತಂದೆ ದೊಡ್ಡಸ್ವಾಮಿಗೌಡ ಕಳೆದ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಆ ಅನುಕಂಪದ ನೆರವಿನಿಂದ ಗೆಲುವಿಗೆ ಪ್ರಯತ್ನಿಸಿದ್ದರೂ ಅಲ್ಪ ಅಂತರದಿಂದ ಎಡವಿದ್ದಾರೆ.