<p>ಮಂಗಳೂರು: ನಗರದ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಶನಿವಾರ ನಡೆದ ಉದ್ಯೋಗ ಮೇಳದಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡರು. 55ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದವು.</p>.<p>ಬಿಲ್ಲವ ಎಂಪ್ಲಾಯಿಸ್ ವೆಲ್ಫೇರ್ ಸೊಸೈಟಿ ಮತ್ತು ಯುವ ವಾಹಿನಿ ಕೇಂದ್ರ ಸಮಿತಿ ಮತ್ತು ಯುಎನ್ಡಿಪಿ- ಎಸ್ಎಪಿ ಪ್ರಾಜೆಕ್ಟ್ ಕೋಡ್ ಉನ್ನತಿ ವತಿಯಿಂದ ಆಯೋಜಿಸಿದ್ದ ಮೇಳವನ್ನು ಬಿಲ್ಲವ ಎಂಪ್ಲಾಯಿಸ್ ವೆಲ್ಫೇರ್ ಸೊಸೈಟಿ ಅಧ್ಯಕ್ಷ ಅಶೋಕ್ ಕುಮಾರ್ ಉದ್ಘಾಟಿಸಿದರು.</p>.<p>‘ಶಿಕ್ಷಣ ಸಂಸ್ಥೆಗಳು ಶಿಕ್ಷಣ ನೀಡುವ ಜೊತೆಗೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಉದ್ಯೋಗ ಒದಗಿಸುವಲ್ಲೂ ನೆರವಾಗಬೇಕು. ‘ವಿದ್ಯೆಯಿಂದ ಸ್ವತಂತ್ರರಾಗಿರಿ, ಸಂಘಟನೆಯಿಂದ ಬಲಯುತರಾಗಿರಿ’ ಎನ್ನುವ ನಾರಾಯಣಗುರುಗಳ ಸಂದೇಶದಂತೆ ನಮ್ಮ ಸೊಸೈಟಿ ಮತ್ತು ಯುವವಾಹಿನಿ ಕಾರ್ಯನಿರ್ವಹಿಸುತ್ತಿವೆ’ ಎಂದರು.</p>.<p>ಗೋಕರ್ಣನಾಥೇಶ್ವರ ಕಾಲೇಜಿನ ಸಂಚಾಲಕ ವಸಂತ ಕಾರಂದೂರು ಮಾತನಾಡಿ, ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಉದ್ಯೋಗ ಮೇಳಗಳು ಉತ್ತಮ ವೇದಿಕೆಯಾಗಿವೆ ಎಂದರು.</p>.<p>ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ರಾಜೇಶ್ ಬಿ. ಅಧ್ಯಕ್ಷತೆ ವಹಿಸಿದ್ದರು. ಕರಾವಳಿ ಶಿಕ್ಷಣದ ಕೇಂದ್ರವಾಗಿದೆ. ಕೆಲವರು ಇಲ್ಲೇ ಉದ್ಯೋಗ ಬಯಸಿದರೆ, ಕೆಲವರು ಹೊರ ದೇಶಗಳಿಗೆ ಅವಕಾಶವನ್ನು ಹುಡುಕಿಕೊಂಡು ಹೋಗುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು, ಸರ್ಕಾರಿ ಉದ್ಯೋಗ ಪಡೆಯಲು ಪ್ರಯತ್ನಿಸಬೇಕು ಎಂದರು.</p>.<p>ಪ್ರಾಂಶುಪಾಲೆ ಆಶಾಲತಾ ಸುವರ್ಣ, ಯುಎನ್ವಿ ಜಿಲ್ಲಾ ಸಂಚಾಲಕ ಶಿವಕುಮಾರ್ ಸ್ವಾಮಿ ಕೆ.ಎಂ. ಇದ್ದರು.</p>.<p>ಯುವ ವಾಹಿನಿ ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕ ನವಾನಂದ ಸ್ವಾಗತಿಸಿದರು. ಪ್ಲೇಸ್ಮೆಂಟ್ ಅಧಿಕಾರಿ ಮಿಥುನ್ಚಂದ್ರ ವಂದಿಸಿದರು. ಶೇಷಪ್ಪ ಅಮೀನ್ ಕಾರ್ಯಕ್ರಮ ನಿರೂಪಿಸಿದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ನಗರದ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಶನಿವಾರ ನಡೆದ ಉದ್ಯೋಗ ಮೇಳದಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡರು. 55ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದವು.</p>.<p>ಬಿಲ್ಲವ ಎಂಪ್ಲಾಯಿಸ್ ವೆಲ್ಫೇರ್ ಸೊಸೈಟಿ ಮತ್ತು ಯುವ ವಾಹಿನಿ ಕೇಂದ್ರ ಸಮಿತಿ ಮತ್ತು ಯುಎನ್ಡಿಪಿ- ಎಸ್ಎಪಿ ಪ್ರಾಜೆಕ್ಟ್ ಕೋಡ್ ಉನ್ನತಿ ವತಿಯಿಂದ ಆಯೋಜಿಸಿದ್ದ ಮೇಳವನ್ನು ಬಿಲ್ಲವ ಎಂಪ್ಲಾಯಿಸ್ ವೆಲ್ಫೇರ್ ಸೊಸೈಟಿ ಅಧ್ಯಕ್ಷ ಅಶೋಕ್ ಕುಮಾರ್ ಉದ್ಘಾಟಿಸಿದರು.</p>.<p>‘ಶಿಕ್ಷಣ ಸಂಸ್ಥೆಗಳು ಶಿಕ್ಷಣ ನೀಡುವ ಜೊತೆಗೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಉದ್ಯೋಗ ಒದಗಿಸುವಲ್ಲೂ ನೆರವಾಗಬೇಕು. ‘ವಿದ್ಯೆಯಿಂದ ಸ್ವತಂತ್ರರಾಗಿರಿ, ಸಂಘಟನೆಯಿಂದ ಬಲಯುತರಾಗಿರಿ’ ಎನ್ನುವ ನಾರಾಯಣಗುರುಗಳ ಸಂದೇಶದಂತೆ ನಮ್ಮ ಸೊಸೈಟಿ ಮತ್ತು ಯುವವಾಹಿನಿ ಕಾರ್ಯನಿರ್ವಹಿಸುತ್ತಿವೆ’ ಎಂದರು.</p>.<p>ಗೋಕರ್ಣನಾಥೇಶ್ವರ ಕಾಲೇಜಿನ ಸಂಚಾಲಕ ವಸಂತ ಕಾರಂದೂರು ಮಾತನಾಡಿ, ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಉದ್ಯೋಗ ಮೇಳಗಳು ಉತ್ತಮ ವೇದಿಕೆಯಾಗಿವೆ ಎಂದರು.</p>.<p>ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ರಾಜೇಶ್ ಬಿ. ಅಧ್ಯಕ್ಷತೆ ವಹಿಸಿದ್ದರು. ಕರಾವಳಿ ಶಿಕ್ಷಣದ ಕೇಂದ್ರವಾಗಿದೆ. ಕೆಲವರು ಇಲ್ಲೇ ಉದ್ಯೋಗ ಬಯಸಿದರೆ, ಕೆಲವರು ಹೊರ ದೇಶಗಳಿಗೆ ಅವಕಾಶವನ್ನು ಹುಡುಕಿಕೊಂಡು ಹೋಗುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು, ಸರ್ಕಾರಿ ಉದ್ಯೋಗ ಪಡೆಯಲು ಪ್ರಯತ್ನಿಸಬೇಕು ಎಂದರು.</p>.<p>ಪ್ರಾಂಶುಪಾಲೆ ಆಶಾಲತಾ ಸುವರ್ಣ, ಯುಎನ್ವಿ ಜಿಲ್ಲಾ ಸಂಚಾಲಕ ಶಿವಕುಮಾರ್ ಸ್ವಾಮಿ ಕೆ.ಎಂ. ಇದ್ದರು.</p>.<p>ಯುವ ವಾಹಿನಿ ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕ ನವಾನಂದ ಸ್ವಾಗತಿಸಿದರು. ಪ್ಲೇಸ್ಮೆಂಟ್ ಅಧಿಕಾರಿ ಮಿಥುನ್ಚಂದ್ರ ವಂದಿಸಿದರು. ಶೇಷಪ್ಪ ಅಮೀನ್ ಕಾರ್ಯಕ್ರಮ ನಿರೂಪಿಸಿದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>