<p><strong>ಕಡಬ (ಉಪ್ಪಿನಂಗಡಿ):</strong> ಮೀಸಲು ಅರಣ್ಯದ ಸಮರ್ಪಕ ಗಡಿ ಗುರುತು ಆಗದೆ ಸಾರ್ವಜನಿಕರಿಗೆ ಹಾಗೂ ಇತರ ಇಲಾಖೆಯ ಅಭಿವೃದ್ದಿ ಕಾರ್ಯಗಳಿಗೆ ತೊಂದರೆ ಉಂಟಾಗುತ್ತಿದೆ. ಕಂದಾಯ ಹಾಗೂ ಅರಣ್ಯ ಇಲಾಖೆಯಿಂದ ಜಂಟಿ ಸರ್ವೆ ನಡೆಯಬೇಕು ಎಂದು ಕಡಬ ತಾಲ್ಲೂಕು ತ್ರೈ ಮಾಸಿಕ ಕೆಡಿಪಿ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು.</p>.<p>ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಅಂಗೀಕರಿಸಲಾಯಿತು.</p>.<p>ಮೀಸಲು ಅರಣ್ಯ ಎಂದು ಆರ್ಟಿಸಿಯಲ್ಲಿ ನಮೂದಾಗಿರುವುದರಿಂದ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನ ಮಾಡಲು ಅರಣ್ಯ ಇಲಾಖೆಯಿಂದ ಕಷ್ಟವಾಗುತ್ತಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿ ಕೆಲವು ಕಡೆ ಕಾಮಗಾರಿ ನಡೆಸಲು ತೊಡಕು ಉಂಟಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.</p>.<p>ಸವಣೂರು ಭಾಗದಲ್ಲಿ ರಸ್ತೆ ಚರಂಡಿ ಬದಿಯಲ್ಲಿ ಅರಣ್ಯ ಇಲಾಖೆಯಿಂದ ಗಿಡಗಳನ್ನು ನೆಡುತ್ತಿದ್ದಾರೆ. ಇದು ಬೆಳೆದು ದೊಡ್ಡದಾಗುತ್ತಾ ವಾಹನ ಸಂಚಾರಕ್ಕೆ ತೊಂದರೆ ಆಗುತ್ತದೆ. ಪೆರಿಯಶಾಂತಿ ರಸ್ತೆ ಬದಿಯಲ್ಲಿ ಅಪಾಯಕಾರಿ ಮರಗಳಿದ್ದರೂ ಅರಣ್ಯ ಇಲಾಖೆ ತೆರವುಗೊಳಿಸಿಲ್ಲ ಎಂಬ ದೂರು ಸಭೆಯಲ್ಲಿ ವ್ಯಕ್ತವಾಯಿತು.</p>.<p>ಶಾಸಕಿ ಮಾತನಾಡಿ, ‘ಅರಣ್ಯ ಇಲಾಖೆಯವರಿಗೆ ಅವರ ಜಾಗ ಎಲ್ಲಿ ಇದೆ ಎಂದು ಗೊತ್ತಿಲ್ಲ’ ಎಂದು ಹೇಳಿದರು.</p>.<p>ಪುತ್ತೂರು ಆರ್ಎಫ್ಒ ಕಿರಣ್ ಪ್ರತಿಕ್ರಿಯಿಸಿ, ‘ನೀವು ಹಾಗೆ ಹೇಳಬೇಡಿ; ನಮಗೆ ಅರಣ್ಯ ಇಲಾಖೆಯ ಜಾಗ ಎಲ್ಲಿದೆ ಎಂದು ಗೊತ್ತಿದೆ’ ಎಂದರು.</p>.<p>ಮೀಸಲು ಅರಣ್ಯದ ಸರಿಯಾದ ಗಡಿ ಗುರುತು ಆದರೆ ಮಾತ್ರ ಈ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಜಂಟಿ ಸರ್ವೆ ಮಾಡಬೇಕು ಎಂದು ನಿರ್ಣಯಿಸಲಾಯಿತು.</p>.<p><strong>ತಹಶೀಲ್ದಾರ್ ಗೈರು, ಆಕ್ಷೇಪ:</strong> ಸಭೆಗೆ ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ ಗೈರಾಗಿದ್ದರು.</p>.<p>ಮಾಹಿತಿ ನೀಡಲು ಕಂದಾಯ ಇಲಾಖೆ ಸಿಬ್ಬಂದಿ ಬಂದಿದ್ದರು. ಈ ಬಗ್ಗೆ ಸದಸ್ಯರು ಆಕ್ಷೇಪಿಸಿ ಅಗತ್ಯ ಇರಬೇಕಾದ ತಹಶೀಲ್ದಾರ್ ಸಭೆಗೆ ಗೈರಾದರೆ ಕಂದಾಯ ಇಲಾಖೆಯ ಸಮಸ್ಯೆಯನ್ನು ಯಾರಲ್ಲಿ ಹೇಳುವುದು ಎಂದು ಪ್ರಶ್ನಿಸಿದರು.</p>.<p>ತುರ್ತುಕಾರ್ಯ ನಿಮಿತ್ತ ಬೆಂಗಳೂರಿಗೆ ತೆರಳಿರುವುದರಿಂದ ಅವರು ಬಂದಿಲ್ಲ ಎಂದು ಸಿಬ್ಬಂದಿ ಹೇಳಿದರು.</p>.<p>ಕಡಬ ತಾಲ್ಲೂಕು ಅಭಿವೃದ್ಧಿ ಆಗಲು ಹಲವು ಕೆಲಸಗಳು ಕಂದಾಯ ಇಲಾಖೆಯಿಂದ ಆಗಬೇಕಿದೆ. ಕ್ರೀಡಾಂಗಣ ನಿರ್ಮಾಣ, ಹೆಲಿಪ್ಯಾಡ್, ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಸೇರಿದಂತೆ ಕೆಲವು ಇಲಾಖೆಗಳಿಗೆ ಜಾಗ ನೀಡಬೇಕಿದೆ ಎಂದರು.</p>.<p>ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ್ ಕುಮಾರ್, ಕೆಡಿಪಿ ಸದಸ್ಯರಾದ ಶಿವರಾಮ ರೈ, ಪದ್ಮನಾಭ ಸಿರಿಬಾಗಿಲು, ಉಷಾ ಜೋಯಿ ನೆಲ್ಯಾಡಿ, ಮೋನಪ್ಪ ಕೊಯಿಲ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಗೌಡ ಇಚ್ಲಂಪಾಡಿ ಮಾತನಾಡಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿವಾರ್ಹಕ ಅಧಿಕಾರಿ ನವೀನ್ ಭಂಡಾರಿ ಸ್ವಾಗತಿಸಿ, ವ್ಯವಸ್ಥಾಪಕ ಭುವನೇಂದ್ರ ಕುಮಾರ್ ವಂದಿಸಿದರು. ವೆಂಕಟ್ರಮಣ ಗೌಡ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡಬ (ಉಪ್ಪಿನಂಗಡಿ):</strong> ಮೀಸಲು ಅರಣ್ಯದ ಸಮರ್ಪಕ ಗಡಿ ಗುರುತು ಆಗದೆ ಸಾರ್ವಜನಿಕರಿಗೆ ಹಾಗೂ ಇತರ ಇಲಾಖೆಯ ಅಭಿವೃದ್ದಿ ಕಾರ್ಯಗಳಿಗೆ ತೊಂದರೆ ಉಂಟಾಗುತ್ತಿದೆ. ಕಂದಾಯ ಹಾಗೂ ಅರಣ್ಯ ಇಲಾಖೆಯಿಂದ ಜಂಟಿ ಸರ್ವೆ ನಡೆಯಬೇಕು ಎಂದು ಕಡಬ ತಾಲ್ಲೂಕು ತ್ರೈ ಮಾಸಿಕ ಕೆಡಿಪಿ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು.</p>.<p>ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಅಂಗೀಕರಿಸಲಾಯಿತು.</p>.<p>ಮೀಸಲು ಅರಣ್ಯ ಎಂದು ಆರ್ಟಿಸಿಯಲ್ಲಿ ನಮೂದಾಗಿರುವುದರಿಂದ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನ ಮಾಡಲು ಅರಣ್ಯ ಇಲಾಖೆಯಿಂದ ಕಷ್ಟವಾಗುತ್ತಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿ ಕೆಲವು ಕಡೆ ಕಾಮಗಾರಿ ನಡೆಸಲು ತೊಡಕು ಉಂಟಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.</p>.<p>ಸವಣೂರು ಭಾಗದಲ್ಲಿ ರಸ್ತೆ ಚರಂಡಿ ಬದಿಯಲ್ಲಿ ಅರಣ್ಯ ಇಲಾಖೆಯಿಂದ ಗಿಡಗಳನ್ನು ನೆಡುತ್ತಿದ್ದಾರೆ. ಇದು ಬೆಳೆದು ದೊಡ್ಡದಾಗುತ್ತಾ ವಾಹನ ಸಂಚಾರಕ್ಕೆ ತೊಂದರೆ ಆಗುತ್ತದೆ. ಪೆರಿಯಶಾಂತಿ ರಸ್ತೆ ಬದಿಯಲ್ಲಿ ಅಪಾಯಕಾರಿ ಮರಗಳಿದ್ದರೂ ಅರಣ್ಯ ಇಲಾಖೆ ತೆರವುಗೊಳಿಸಿಲ್ಲ ಎಂಬ ದೂರು ಸಭೆಯಲ್ಲಿ ವ್ಯಕ್ತವಾಯಿತು.</p>.<p>ಶಾಸಕಿ ಮಾತನಾಡಿ, ‘ಅರಣ್ಯ ಇಲಾಖೆಯವರಿಗೆ ಅವರ ಜಾಗ ಎಲ್ಲಿ ಇದೆ ಎಂದು ಗೊತ್ತಿಲ್ಲ’ ಎಂದು ಹೇಳಿದರು.</p>.<p>ಪುತ್ತೂರು ಆರ್ಎಫ್ಒ ಕಿರಣ್ ಪ್ರತಿಕ್ರಿಯಿಸಿ, ‘ನೀವು ಹಾಗೆ ಹೇಳಬೇಡಿ; ನಮಗೆ ಅರಣ್ಯ ಇಲಾಖೆಯ ಜಾಗ ಎಲ್ಲಿದೆ ಎಂದು ಗೊತ್ತಿದೆ’ ಎಂದರು.</p>.<p>ಮೀಸಲು ಅರಣ್ಯದ ಸರಿಯಾದ ಗಡಿ ಗುರುತು ಆದರೆ ಮಾತ್ರ ಈ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಜಂಟಿ ಸರ್ವೆ ಮಾಡಬೇಕು ಎಂದು ನಿರ್ಣಯಿಸಲಾಯಿತು.</p>.<p><strong>ತಹಶೀಲ್ದಾರ್ ಗೈರು, ಆಕ್ಷೇಪ:</strong> ಸಭೆಗೆ ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ ಗೈರಾಗಿದ್ದರು.</p>.<p>ಮಾಹಿತಿ ನೀಡಲು ಕಂದಾಯ ಇಲಾಖೆ ಸಿಬ್ಬಂದಿ ಬಂದಿದ್ದರು. ಈ ಬಗ್ಗೆ ಸದಸ್ಯರು ಆಕ್ಷೇಪಿಸಿ ಅಗತ್ಯ ಇರಬೇಕಾದ ತಹಶೀಲ್ದಾರ್ ಸಭೆಗೆ ಗೈರಾದರೆ ಕಂದಾಯ ಇಲಾಖೆಯ ಸಮಸ್ಯೆಯನ್ನು ಯಾರಲ್ಲಿ ಹೇಳುವುದು ಎಂದು ಪ್ರಶ್ನಿಸಿದರು.</p>.<p>ತುರ್ತುಕಾರ್ಯ ನಿಮಿತ್ತ ಬೆಂಗಳೂರಿಗೆ ತೆರಳಿರುವುದರಿಂದ ಅವರು ಬಂದಿಲ್ಲ ಎಂದು ಸಿಬ್ಬಂದಿ ಹೇಳಿದರು.</p>.<p>ಕಡಬ ತಾಲ್ಲೂಕು ಅಭಿವೃದ್ಧಿ ಆಗಲು ಹಲವು ಕೆಲಸಗಳು ಕಂದಾಯ ಇಲಾಖೆಯಿಂದ ಆಗಬೇಕಿದೆ. ಕ್ರೀಡಾಂಗಣ ನಿರ್ಮಾಣ, ಹೆಲಿಪ್ಯಾಡ್, ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಸೇರಿದಂತೆ ಕೆಲವು ಇಲಾಖೆಗಳಿಗೆ ಜಾಗ ನೀಡಬೇಕಿದೆ ಎಂದರು.</p>.<p>ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ್ ಕುಮಾರ್, ಕೆಡಿಪಿ ಸದಸ್ಯರಾದ ಶಿವರಾಮ ರೈ, ಪದ್ಮನಾಭ ಸಿರಿಬಾಗಿಲು, ಉಷಾ ಜೋಯಿ ನೆಲ್ಯಾಡಿ, ಮೋನಪ್ಪ ಕೊಯಿಲ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಗೌಡ ಇಚ್ಲಂಪಾಡಿ ಮಾತನಾಡಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿವಾರ್ಹಕ ಅಧಿಕಾರಿ ನವೀನ್ ಭಂಡಾರಿ ಸ್ವಾಗತಿಸಿ, ವ್ಯವಸ್ಥಾಪಕ ಭುವನೇಂದ್ರ ಕುಮಾರ್ ವಂದಿಸಿದರು. ವೆಂಕಟ್ರಮಣ ಗೌಡ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>