ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾದ 38 ಜನರಿಗೆ ನ್ಯಾಯಾಂಗ ಬಂಧನ

Last Updated 13 ಜೂನ್ 2021, 3:35 IST
ಅಕ್ಷರ ಗಾತ್ರ

ಮಂಗಳೂರು: ನಗರದ ವಿವಿಧೆಡೆ ಅಕ್ರಮವಾಗಿ ವಾಸವಿದ್ದ ಶ್ರೀಲಂಕಾದ 38 ಜನರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ತಮಿಳುನಾಡಿನ ಮೂಲಕ ನಗರಕ್ಕೆ ಬಂದಿರುವ ಕುರಿತು ತಮಿಳುನಾಡು ಗುಪ್ತಚರ ಇಲಾಖೆ ನೀಡಿದ ಮಾಹಿತಿಯಂತೆ ನಗರದ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಶುಕ್ರವಾರ ಮೂರು ಕಡೆಗಳಲ್ಲಿ ವಾಸವಾಗಿದ್ದ 38 ಜನರನ್ನು ವಶಕ್ಕೆ ಪಡೆದಿದ್ದರು.

ತಮಿಳುನಾಡಿನ ಡಿಎಸ್ಪಿ ಹಾಗೂ ಇನ್‌ಸ್ಪೆಕ್ಟರ್‌ ನೇತೃತ್ವದ ತಂಡ ನಗರಕ್ಕೆ ಬಂದಿದ್ದು, ತನಿಖೆಗೆ ಅಗತ್ಯ ಸಹಕಾರ ನೀಡುತ್ತಿದೆ. ಪ್ರಕರಣದ ಕುರಿತು ವಿದೇಶಾಂಗ ಸಚಿವಾಲಯಕ್ಕೂ ಮಾಹಿತಿ ರವಾನಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್‌ ಎನ್‌. ಶಶಿಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT