<p><strong>ಮಂಗಳೂರು</strong>: ಉಳ್ಳಾಲ ಕಾಪಿಕಾಡ್ನ ಶ್ರೀ ಉಮಾಮಹೇಶ್ವರಿ ಕಬಡ್ಡಿ ಅಕಾಡೆಮಿ, ಎ.ಜಯಣ್ಣ ಸ್ಮರಣಾರ್ಥ ಆಯೋಜಿಸಿರುವ ಕಬಡ್ಡಿ ಟೂರ್ನಿಗಳು ಅಕ್ಟೋಬರ್ 8 ಮತ್ತು 9ರಂದು ನಗರದ ನೆಹರು ಮೈದಾನದಲ್ಲಿ ನಡೆಯಲಿವೆ.</p>.<p>8ರಂದು ದಕ್ಷಿಣ ಕನ್ನಡ ಜಿಲ್ಲಾ ಹೈಸ್ಕೂಲ್ ಬಾಲಕ ಮತ್ತು ಬಾಲಕಿಯರ ಟೂರ್ನಿ ನಡೆಯಲಿದ್ದು 9ರಂದು ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳ ಪುರುಷರ ಟೂರ್ನಿ ಆಯೋಜಿಸಲಾಗಿದೆ ಎಂದು ಸಂಚಾಲಕ ಗೋಪಿನಾಥ್ ಕಾಪಿಕಾಡ್ ಶನಿವಾರ ಪತ್ರಿಕಾಗೋಷ್ಠಿಯಲ್ಲಿತಿಳಿಸಿದರು.</p>.<p>ಹೈಸ್ಕೂಲ್ ವಿದ್ಯಾರ್ಥಿಗಳ ಟೂರ್ನಿಯ ಚಾಂಪಿಯನ್ ತಂಡಕ್ಕೆ ₹ 10 ಸಾವಿರ, ರನ್ನರ್ ಅಪ್ ತಂಡಕ್ಕೆ ₹ 7,000 ಮತ್ತು ಮೂರನೇ ಸ್ಥಾನ ಗಳಿಸಿದ ತಂಡಕ್ಕೆ ₹ 3 ಸಾವಿರ ನಗದು ನೀಡಲಾಗುವುದು. ಶಾಶ್ವತ ಫಲಕ ಮತ್ತು ವೈಯಕ್ತಿಕ ಬಹುಮಾನವೂ ಇದೆ. ಕಾಲೇಜು ವಿದ್ಯಾರ್ಥಿಗಳ ಟೂರ್ನಿಯ ವಿಜೇತರಿಗೆ ₹ 25 ಸಾವಿರ, ರನ್ನರ್ ಅಪ್ ತಂಡಕ್ಕೆ ₹ 15 ಸಾವಿರ ಮತ್ತು ಮೂರನೇ ಸ್ಥಾನ ಗಳಿಸಿದ ತಂಡಕ್ಕೆ ₹ 5 ಸಾವಿರ ಬಹುಮಾನ ಮೊತ್ತ ಸಿಗಲಿದೆ. ಶಾಶ್ವತ ಫಲಕ ಮತ್ತು ವೈಯಕ್ತಿಕ ಬಹುಮಾನವನ್ನೂ ನೀಡಲಾಗುವುದು ಎಂದು ಅವರು ವಿವರಿಸಿದರು.</p>.<p>2016ರಲ್ಲಿ ಆರಂಭವಾದ ಅಕಾಡೆಮಿ ಈ ವರೆಗೆ 7 ಟೂರ್ನಿಗಳನ್ನು ಆಯೋಜಿಸಿದ್ದು ಮಾಸ್ಟರ್ಸ್ ಕಬಡ್ಡಿ ಟೂರ್ನಿಯನ್ನೂ ಆಯೋಜಿಸಲಾಗಿದೆ. ಯುವ ಪ್ರತಿಭೆಗಳಿಗೆ ಉಚಿತ ತರಬೇತಿ ನೀಡಲಾಗುತ್ತಿದ್ದು ಕಬಡ್ಡಿಪಟುಗಳಿಗೆ ಸಂಕಷ್ಟದಲ್ಲಿ ನೆರವಾಗಲು ಕ್ರೀಡಾರಕ್ಷಾ ನಿಧಿಯನ್ನು ಸ್ಥಾಪಿಸಲಾಗಿದೆ ಎಂದು ಅವರು ವಿವರಿಸಿದರು.</p>.<p>ಅಧ್ಯಕ್ಷ ಎ.ಜೆ.ಶೇಖರ್, ಉಪಾಧ್ಯಕ್ಷ ದಿನೇಶ್ ಅತ್ತಾವರ, ಪ್ರಧಾನ ಕಾರ್ಯದರ್ಶಿ ದಿನೇಶ್ ಕಳ್ಳಿಗೆ ಮತ್ತು ಸಂಘಟನಾ ಕಾರ್ಯದರ್ಶಿ ಗಣೇಶ್ ಕಾಪಿಕಾಡ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಉಳ್ಳಾಲ ಕಾಪಿಕಾಡ್ನ ಶ್ರೀ ಉಮಾಮಹೇಶ್ವರಿ ಕಬಡ್ಡಿ ಅಕಾಡೆಮಿ, ಎ.ಜಯಣ್ಣ ಸ್ಮರಣಾರ್ಥ ಆಯೋಜಿಸಿರುವ ಕಬಡ್ಡಿ ಟೂರ್ನಿಗಳು ಅಕ್ಟೋಬರ್ 8 ಮತ್ತು 9ರಂದು ನಗರದ ನೆಹರು ಮೈದಾನದಲ್ಲಿ ನಡೆಯಲಿವೆ.</p>.<p>8ರಂದು ದಕ್ಷಿಣ ಕನ್ನಡ ಜಿಲ್ಲಾ ಹೈಸ್ಕೂಲ್ ಬಾಲಕ ಮತ್ತು ಬಾಲಕಿಯರ ಟೂರ್ನಿ ನಡೆಯಲಿದ್ದು 9ರಂದು ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳ ಪುರುಷರ ಟೂರ್ನಿ ಆಯೋಜಿಸಲಾಗಿದೆ ಎಂದು ಸಂಚಾಲಕ ಗೋಪಿನಾಥ್ ಕಾಪಿಕಾಡ್ ಶನಿವಾರ ಪತ್ರಿಕಾಗೋಷ್ಠಿಯಲ್ಲಿತಿಳಿಸಿದರು.</p>.<p>ಹೈಸ್ಕೂಲ್ ವಿದ್ಯಾರ್ಥಿಗಳ ಟೂರ್ನಿಯ ಚಾಂಪಿಯನ್ ತಂಡಕ್ಕೆ ₹ 10 ಸಾವಿರ, ರನ್ನರ್ ಅಪ್ ತಂಡಕ್ಕೆ ₹ 7,000 ಮತ್ತು ಮೂರನೇ ಸ್ಥಾನ ಗಳಿಸಿದ ತಂಡಕ್ಕೆ ₹ 3 ಸಾವಿರ ನಗದು ನೀಡಲಾಗುವುದು. ಶಾಶ್ವತ ಫಲಕ ಮತ್ತು ವೈಯಕ್ತಿಕ ಬಹುಮಾನವೂ ಇದೆ. ಕಾಲೇಜು ವಿದ್ಯಾರ್ಥಿಗಳ ಟೂರ್ನಿಯ ವಿಜೇತರಿಗೆ ₹ 25 ಸಾವಿರ, ರನ್ನರ್ ಅಪ್ ತಂಡಕ್ಕೆ ₹ 15 ಸಾವಿರ ಮತ್ತು ಮೂರನೇ ಸ್ಥಾನ ಗಳಿಸಿದ ತಂಡಕ್ಕೆ ₹ 5 ಸಾವಿರ ಬಹುಮಾನ ಮೊತ್ತ ಸಿಗಲಿದೆ. ಶಾಶ್ವತ ಫಲಕ ಮತ್ತು ವೈಯಕ್ತಿಕ ಬಹುಮಾನವನ್ನೂ ನೀಡಲಾಗುವುದು ಎಂದು ಅವರು ವಿವರಿಸಿದರು.</p>.<p>2016ರಲ್ಲಿ ಆರಂಭವಾದ ಅಕಾಡೆಮಿ ಈ ವರೆಗೆ 7 ಟೂರ್ನಿಗಳನ್ನು ಆಯೋಜಿಸಿದ್ದು ಮಾಸ್ಟರ್ಸ್ ಕಬಡ್ಡಿ ಟೂರ್ನಿಯನ್ನೂ ಆಯೋಜಿಸಲಾಗಿದೆ. ಯುವ ಪ್ರತಿಭೆಗಳಿಗೆ ಉಚಿತ ತರಬೇತಿ ನೀಡಲಾಗುತ್ತಿದ್ದು ಕಬಡ್ಡಿಪಟುಗಳಿಗೆ ಸಂಕಷ್ಟದಲ್ಲಿ ನೆರವಾಗಲು ಕ್ರೀಡಾರಕ್ಷಾ ನಿಧಿಯನ್ನು ಸ್ಥಾಪಿಸಲಾಗಿದೆ ಎಂದು ಅವರು ವಿವರಿಸಿದರು.</p>.<p>ಅಧ್ಯಕ್ಷ ಎ.ಜೆ.ಶೇಖರ್, ಉಪಾಧ್ಯಕ್ಷ ದಿನೇಶ್ ಅತ್ತಾವರ, ಪ್ರಧಾನ ಕಾರ್ಯದರ್ಶಿ ದಿನೇಶ್ ಕಳ್ಳಿಗೆ ಮತ್ತು ಸಂಘಟನಾ ಕಾರ್ಯದರ್ಶಿ ಗಣೇಶ್ ಕಾಪಿಕಾಡ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>