<p><strong>ಪುತ್ತೂರು:</strong> ಆದರ್ಶ ರೈಲು ನಿಲ್ದಾಣವಾಗಿ ಮೇಲ್ದರ್ಜೆಗೆ ಏರಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಬಕ ಪುತ್ತೂರು ರೈಲ್ವೆ ನಿಲ್ದಾಣದಲ್ಲಿ ಮಳೆನೀರು ಇಂಗಿಸುವ ಕಾರ್ಯ, ಸ್ವಚ್ಛತೆ ಹಾಗೂ ಸೌಂದರ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ. ಇಲ್ಲಿನ ಸಿಬ್ಬಂದಿ ಇದಕ್ಕಾಗಿ ವಿಶೇಷ ಆಸಕ್ತಿ ವಹಿಸುತ್ತಿದ್ದಾರೆ.</p>.<p>ದರ್ಶ ರೈಲು ನಿಲ್ದಾಣವಾಗಿ ಮೇಲ್ದರ್ಜೆಗೆ ಏರಿರುವ ಬಳಿಕ ಈ ರೈಲ್ವೆ ನಿಲ್ದಾಣ ಎಲ್ಲರನ್ನೂ ಆಕರ್ಷಿಸುತ್ತಿದೆ. ನಿಲ್ದಾಣದಲ್ಲಿ ಸಿಬ್ಬಂದಿ ಸಹಕಾರದಿಂದ ₹ 20 ಸಾವಿರ ವೆಚ್ಚ ಮಾಡಿ ಮುಂಭಾಗದಲ್ಲಿ ಉದ್ಯಾನ ನಿರ್ಮಿಸಲಾಗಿದೆ. ಫ್ಲಾಟ್ ಫಾರಂನಲ್ಲಿ ರೈಲ್ವೆ ಕಚೇರಿ ಗೋಡೆಗಳ ಬಳಿ ಹೂ ಕುಂಡಗಳನ್ನು ಇರಿಸಲಾಗಿದೆ. ನಿಲ್ದಾಣವು ಸ್ವಚ್ಛತೆಗೆ ಮಾದರಿಯಾದಂತೆ ಸೌಂದರ್ಯಕ್ಕೂ ಮಾದರಿಯಾಗಿದೆ.</p>.<p>ವಿಸ್ಟಾ ಡೋಮ್ ಬೋಗಿಯೊಂದಿಗೆ ಯಶವಂತಪುರ-ಮಂಗಳೂರು ರೈಲು ಸಂಚಾರ ಭಾನುವಾರ ಮಂಗಳೂರು ರೈಲ್ವೆ ಜಂಕ್ಷನ್ ನಿಲ್ದಾಣದಲ್ಲಿ ಉದ್ಘಾಟನೆಗೊಳ್ಳಲಿದೆ. ಬೆಳಿಗ್ಗೆ 10 ಗಂಟೆಗೆ ಕಬಕ ಪುತ್ತೂರು ರೈಲ್ವೆ ನಿಲ್ದಾಣಕ್ಕೆ ತಲುಪುವ ರೈಲು ಬಂಡಿಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಸ್ವಾಗತಿಸಲಾಗುವುದು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಈ ರೈಲ್ ಅನ್ನು ನೋಡಲು ಪುತ್ತೂರಿನ ಜನರು ಕಾತರರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು:</strong> ಆದರ್ಶ ರೈಲು ನಿಲ್ದಾಣವಾಗಿ ಮೇಲ್ದರ್ಜೆಗೆ ಏರಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಬಕ ಪುತ್ತೂರು ರೈಲ್ವೆ ನಿಲ್ದಾಣದಲ್ಲಿ ಮಳೆನೀರು ಇಂಗಿಸುವ ಕಾರ್ಯ, ಸ್ವಚ್ಛತೆ ಹಾಗೂ ಸೌಂದರ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ. ಇಲ್ಲಿನ ಸಿಬ್ಬಂದಿ ಇದಕ್ಕಾಗಿ ವಿಶೇಷ ಆಸಕ್ತಿ ವಹಿಸುತ್ತಿದ್ದಾರೆ.</p>.<p>ದರ್ಶ ರೈಲು ನಿಲ್ದಾಣವಾಗಿ ಮೇಲ್ದರ್ಜೆಗೆ ಏರಿರುವ ಬಳಿಕ ಈ ರೈಲ್ವೆ ನಿಲ್ದಾಣ ಎಲ್ಲರನ್ನೂ ಆಕರ್ಷಿಸುತ್ತಿದೆ. ನಿಲ್ದಾಣದಲ್ಲಿ ಸಿಬ್ಬಂದಿ ಸಹಕಾರದಿಂದ ₹ 20 ಸಾವಿರ ವೆಚ್ಚ ಮಾಡಿ ಮುಂಭಾಗದಲ್ಲಿ ಉದ್ಯಾನ ನಿರ್ಮಿಸಲಾಗಿದೆ. ಫ್ಲಾಟ್ ಫಾರಂನಲ್ಲಿ ರೈಲ್ವೆ ಕಚೇರಿ ಗೋಡೆಗಳ ಬಳಿ ಹೂ ಕುಂಡಗಳನ್ನು ಇರಿಸಲಾಗಿದೆ. ನಿಲ್ದಾಣವು ಸ್ವಚ್ಛತೆಗೆ ಮಾದರಿಯಾದಂತೆ ಸೌಂದರ್ಯಕ್ಕೂ ಮಾದರಿಯಾಗಿದೆ.</p>.<p>ವಿಸ್ಟಾ ಡೋಮ್ ಬೋಗಿಯೊಂದಿಗೆ ಯಶವಂತಪುರ-ಮಂಗಳೂರು ರೈಲು ಸಂಚಾರ ಭಾನುವಾರ ಮಂಗಳೂರು ರೈಲ್ವೆ ಜಂಕ್ಷನ್ ನಿಲ್ದಾಣದಲ್ಲಿ ಉದ್ಘಾಟನೆಗೊಳ್ಳಲಿದೆ. ಬೆಳಿಗ್ಗೆ 10 ಗಂಟೆಗೆ ಕಬಕ ಪುತ್ತೂರು ರೈಲ್ವೆ ನಿಲ್ದಾಣಕ್ಕೆ ತಲುಪುವ ರೈಲು ಬಂಡಿಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಸ್ವಾಗತಿಸಲಾಗುವುದು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಈ ರೈಲ್ ಅನ್ನು ನೋಡಲು ಪುತ್ತೂರಿನ ಜನರು ಕಾತರರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>