ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತೆಂಕುತಿಟ್ಟಿನ ತಿರುಗಾಟದ ಮೇಳಗಳಲ್ಲಿ ಹಿಮ್ಮೇಳವಾದಕರಾಗಿ ಮೂರು ದಶಕಗಳ ಕಾಲ ಕಲಾ ಸೇವೆ ಮಾಡಿ ಮೃತರಾದ ಕಡಬದ ನಾರಾಯಣ ಆಚಾರ್ಯ ಮತ್ತು 34ನೇ ವಯಸ್ಸಿಗೆ ಮೃತಪಟ್ಟ ಅವರ ಪುತ್ರ, ಪ್ರಸಿದ್ಧ ಹಿಮ್ಮೇಳ ಕಲಾವಿದ ವಿನಯ ಆಚಾರ್ಯ ಸ್ಮರಣಾರ್ಥ ಈ ಪ್ರಶಸ್ತಿ ನೀಡಲಾಗುತ್ತದೆ. ಈ ಬಾರಿ ನಾರಾಯಣ ಆಚಾರ್ಯ ಅವರ ಗುರುಗಳಾದ ಹರಿನಾರಾಯಣ ಬೈಪಾಡಿತ್ತಾಯ ಅವರನ್ನು ಸಮಿತಿ ಪ್ರಶಸ್ತಿಗೆ ಆಯ್ಕೆ ಮಾಡಿದೆ’ ಎಂದರು.